Tuesday, September 17, 2024

ಯುವ ಜನರಲ್ಲಿ ಹೆಚ್ಚುತ್ತಿರುವ ಹೃದಯಾಘಾತ ತಡೆಯುವುದು ಹೇಗೆ ?

ಯುವ ಜನರಲ್ಲಿ ಹೆಚ್ಚುತ್ತಿರುವ ಹೃದಯಾಘಾತ ತಡೆಯುವುದು ಹೇಗೆ ?

ಯುವಜನರಲ್ಲಿ ಹೆಚ್ಚುತ್ತಿರುವ ಹೃದಯಾಘಾತ ತೀವ್ರ ಆತಂಕಕಾರಿ ವಿಷಯ. ಭಾರತದಲ್ಲಿ ಹೃದಯಾಘಾತದ ಪ್ರಕರಣಗಳು ತೀವ್ರ ಗತಿಯಲ್ಲಿ ಹೆಚ್ಚಾಗುತ್ತಿದೆ. ಇಂದಿನ ಮಕ್ಕಳಿಗೆ ಶಾಲಾ ದಿನಗಳಿಂದಲೇ ಹೃದಯಘಾತದ ದುಷ್ಪರಿಣಾಮಗಳಿಗೆ ಕಾರಣವಾಗುವ ವಿವಿಧ ಗಂಡಾಂತರಕಾರಿ ಅಂಶಗಳ ಬಗ್ಗೆ ತಿಳಿಸಿ ಅವರನ್ನು ಜಾಗೃತಗೊಳಿಸುವ ಮುಖಾಂತರ ಆರೋಗ್ಯ ಸದೃಢ ಭವಿಷ್ಯದ ಭಾರತ ನಿರ್ಮಾಣ ಮಾಡುವ ಈ ಸಂದರ್ಭದಲ್ಲಿ ಅಗತ್ಯವಿದೆ.

ಭಾರತದಲ್ಲಿ ಹೃದಯಾಘಾತದ ಪ್ರಕರಣಗಳು ತೀವ್ರ ಗತಿಯಲ್ಲಿ ಹೆಚ್ಚಾಗುತ್ತಿದೆ.ಇದಕ್ಕೆ ವಿರೋಧಾಭಾಸವಾಗಿ ಅಭಿವೃದ್ದಿ ಹೊಂದಿದ ರಾಷ್ಟ್ರಗಳಲ್ಲಿ ಹೃದಯಘಾತ ಪ್ರಕರಣಗಳು ಗಣನೀಯವಾಗಿ ಕಡಿಮೆಯಾಗುತ್ತಿದೆ. ಆ ದೇಶಗಳಲ್ಲಿನ ಜನ ಸಾಮಾನ್ಯರಲ್ಲಿ ಹೆಚ್ಚಿದ ಜಾಗೃತಿ ಹಾಗೂ ಆರಂಭದ ವರ್ಷಗಳಲ್ಲೇ ಕೈಗೊಂಡ ಮುನ್ನೆಚ್ಚರಿಕೆಗಳ ಫಲವಾಗಿ ಹಾರ್ಟ್ ಆಟ್ಯಾಕ್ ಹತೋಟಿಗೆ ಬಂದಿದೆ. ಮುಂಜಾಗ್ರತೆ ಕ್ರಮಗಳನ್ನು ಪರಿಣಾಮಕಾರಿಯಾಗಿ ಅಳವಡಿಸಿಕೊಳ್ಳುವುದರಿಂದ ಹೃದಯಾಘಾತವನ್ನು ದೊಡ್ಡ ಮಟ್ಟದಲ್ಲಿ ತಡೆಗಟ್ಟಬಹುದು.

ಭಾರತದಲ್ಲೂ ತುರ್ತಾಗಿ ಈ ಜಾಗೃತಿ ಮತ್ತು ಅರಿವಿನ ಅಗತ್ಯವಿದೆ. ಏಕೆಂದರೆ ಉತ್ಪಾದಕತೆಯ ಜೀವನದ (ಹಣ ಸಂಪಾದನೆಯ) ಗರಿಷ್ಠ ಮಟ್ಟದಲ್ಲಿದ್ದಾಗ ಬಹುತೇಕ ಮಂದಿ ಹೃದಯಘಾತಕ್ಕೆ ತುತ್ತಾಗುತ್ತಿರುವುದರಿಂದ ಜಾಗೃತಿ ಮೂಡಿಸುವುದು ಅಗತ್ಯವಾಗಿದೆ. ಬದಲಾದ ಜೀವನಶೈಲಿ, ದೈಹಿಕ ಶ್ರಮವಿಲ್ಲದ ದುಡಿಮೆ ಭಾರತೀಯರಲ್ಲಿ ಹೃದಯಾಘಾತದ ಸಾಧ್ಯತಾ ಪ್ರಮಾಣ ಹೆಚ್ಚಿಸಿದೆ. ಆದರೂ ಶೇ. 76ರಷ್ಟುಜನರು ಸಮಸ್ಯೆ ಅಂತಿಮ ಹಂತಕ್ಕೆ ಹೋಗುವ ತನಕ ವೈದ್ಯರ ತಪಾಸಣೆಗೆ ಒಳಗಾಗುತ್ತಿಲ್ಲ.

20ರಿಂದ 65 ವಯೋಮಾನದ ಶೇ.60ರಷ್ಟು ಭಾರತೀಯರಿಗೆಈ ಕುರಿತು ಸೂಕ್ತ ತಿಳುವಳಿಕೆಯೇ ಇಲ್ಲ. 20ರಿಂದ 30ರ ಹರೆಯದ ಯುವ ಜನತೆ, ತಮಗೆ ಹೃದಯಸಂಬಂಧಿ ಸಮಸ್ಯೆ ಬರುವುದಿಲ್ಲ ಎಂಬ ದೃಢನಂಬಿಕೆಯಲ್ಲಿ ತಪಾಸಣೆಗೆ ಒಳಗಾಗುವುದಿಲ್ಲ.ಇತ್ತೀಚಿನ ಸಾಮಾಜಿಕ ಜಾಲತಾಣ ಯುಗದಲ್ಲಿ ಆರೋಗ್ಯಕ್ಕೆ ಅಪಾಯಕಾರಿಯಾಗುವ ಜೀವನ ಶೈಲಿಯ ನಡುವಳಿಕೆಗಳಿಗಳನ್ನು ಅಳುವಡಿಸಿ ಕೊಳ್ಳುತ್ತಿದ್ದಾರೆ . ದಿನಗಳಲ್ಲಿ ಆದರೆ, ಶೇ. 20ರಷ್ಟು ಜನರಿಗೆ ಹೃದ್ರೋಗ ವಂಶವಾಹಿಯಾಗಿದೆ ಎಂದು ಆರೋಗ್ಯ ಸಮೀಕ್ಷೆ ತಿಳಿಸಿದ್ದು, ಆಧುನಿಕ ಜೀವನಶೈಲಿಯು ಯುವಜನತೆಯಲ್ಲಿ ಹೃದಯನಾಳ ತೊಂದರೆ, ಹೃದಯಾಘಾತ, ಪಾಶ್ರ್ವವಾಯು ಸಂಭವವನ್ನು ಮೂರುಪಟ್ಟು ಹೆಚ್ಚಿಸಿದೆ. ಭಾರತದಲ್ಲಿ ಹೃದಯಾಘಾತ ಸಂಭವದ ವಯೋಮಿತಿಯು 40ರಿಂದ 30 ವರ್ಷಕ್ಕೆ ಇಳಿದಿದೆ. ಇದೊಂದು ಆತಂಕದ ವಿಷಯ.

ಕೂತಲ್ಲೇ ಕೆಲಸ (ಮಾಹಿತಿ ತಂತ್ರಜ್ಞಾನ, ಕಚೇರಿ ಕೆಲಸ); ವಿಶ್ರಾಂತಿರಹಿತ ದುಡಿಮೆ, ದೈಹಿಕ ಚಟುವಟಿಕೆ ಇಲ್ಲದಿರುವುದು, ಧೂಮಪಾನ, ಮದ್ಯಪಾನ ಹವ್ಯಾಸ-ಹೃದಯಾಘಾತ ಹೆಚ್ಚಲು ಪ್ರಮುಖ ಕಾರಣವಾಗಿದೆ. ವಿಶ್ವ ಆರೋಗ್ಯ ಸಂಸ್ಥೆ (WHO) ಪ್ರಕಾರ, ಪ್ರಪಂಚದ ನಂಬರ್ ಒನ್ ಕಿಲ್ಲರ್ ಹೃದಯಾಘಾತ.ಒತ್ತಡದ ಜೀವನ, ದೇಹದಲ್ಲಿ ಹೆಚ್ಚಿನ ಕೊಬ್ಬಿನಂಶ, ಧೂಮಪಾನ, ಮದ್ಯಪಾನ, ದೈಹಿಕ ಶ್ರಮ ರಹಿತ ಜೀವನ ಹೃದಯಾಘಾತ ಸಂಭವ ಹೆಚ್ಚಲು ಪ್ರಮುಖ ಕಾರಣ. ನಿಯಮಿತವಾಗಿ ದೇಹ ತೂಕದ ತಪಾಸಣೆ, ಕೊಬ್ಬು ರಹಿತ ಪದಾರ್ಥಗಳ ಸೇವನೆ ಹಾಗೂ ಪ್ರತಿದಿನಿತ್ಯ 45 ನಿಮಿಷಗಳ ಕಾಲ ವೇಗದ ನಡಿಗೆ ಮಾಡುವ ಮೂಲಕ ಹೃದಯ ಸಂಬಂಧಿ ರೋಗಗಳನ್ನು ನಿಯಂತ್ರಿಸಬಹುದು.

ಜೀವನಶೈಲಿ ಬದಲಾವಣೆ: ಒತ್ತಡಕ್ಕೆ ಸಂಬಂಧಿಸಿದ ಹೃದ್ರೋಗ ತಡೆಗಟ್ಟಲು ಜೀವನಶೈಲಿ ಬದಲಾವಣೆಯೂ ಅಗತ್ಯ.

1. ಧೂಮಪಾನ ವರ್ಜಿಸಿ : ಧೂಮಪಾನ ದುಶ್ಚಟದಿಂದ ದೂರವಿರಿ. ಧೂಮಪಾನ ವರ್ಜಿಸಲು ನಿರ್ಧರಿಸಿದ ತಕ್ಷಣ ಸಿಗರೇಟ್‍ಗಳು, ಆ್ಯಷ್‍ಟ್ರೇ ಮತ್ತು ಲೈಟರ್‍ನನ್ನು ಹೊರಗೆ ಎಸೆಯಿರಿ.ನಿಮ್ಮ ವೈದ್ಯರೊಂದಿಗೆ ಈ ಕುರಿತು ಮುಕ್ತ ಚರ್ಚೆ ನಡೆಸಿರಿ. ಧೂಮಪಾನ ವರ್ಜಿಸಿದ ನಂತರ ನಿಮ್ಮ ದೇಹದಲ್ಲಿ ಕೆಲವು ಪ್ರತಿಕ್ರಿಯೆಗಳು ಕಂಡುಬಂದರೆ ಔಷಧಿ ನೀಡಬೇಕಾಗುತ್ತದೆ. ನಿಮಗೆ ನಿಕೋಟಿನ್ ಪರ್ಯಾಯದ ಅಗತ್ಯವಿದಯೇ ಎಂಬುದನ್ನು ಪರೀಕ್ಷಿಸಿಕೊಳ್ಳಿ. ಇದು ಗಮ್, ಇನ್‍ಹೇಲರ್ ಮೊದಲಾದ ರೂಪದಲ್ಲಿ ಬರುತ್ತದೆ. ಯಾವುದೇ ರೀತಿಯ ತಂಬಾಕು ಸೇವನೆ ಗುಟ್ಕಾ , ಪಾನ್ ಬೀಡಾ , ನಸ್ಯ (snuff) ಚಟಗಳನ್ನು ಬಿಡಬೇಕು

2. ಆರೋಗ್ಯಕರ ಆಹಾರ : ಆರೋಗ್ಯ ರಕ್ಷಣೆ ಹಾಗೂ ದೈಹಿಕ-ಮಾನಸಿಕ ಆರೋಗ್ಯ ಹೆಚ್ಚಳದಲ್ಲಿ ಉತ್ತಮ ಆಹಾರ ಮಹತ್ವದ ಪಾತ್ರ ವಹಿಸುತ್ತದೆ. ಹಸಿರು ತಾಜಾ ತರಕಾರಿ , ಹಣ್ಣು ಹಂಪಲ , ಡ್ರೈ ಫ್ರುಟ್ಸ್ ,ಪೂರ್ತಿ ಕಾಳು ಆರೋಗ್ಯಕರವಾದ ಸಂತುಲಿತ ಮತ್ತು ಪ್ರೊಟೀನ್ ಯುಕ್ತ ಪೌಷ್ಟಿಕ ಆಹಾರ ದೇಹವನ್ನು ಸಮತೋಲನದಲ್ಲಿ ಇಡುತ್ತದೆ. ಆದರೆ ಸಕಾಲದಲ್ಲಿ ಸೇವನೆ ಮತ್ತು ಸೂಕ್ತ ಪ್ರಮಾಣದಲ್ಲಿ ಆಹಾರ ಸೇವನೆ ಮುಖ್ಯ. ಆದಷ್ಟು ಬಿಳಿ ಪೂರ್ಣ ಪಾಲಿಶ್ ಮಾಡಿದ ಅಕ್ಕಿ ಅನ್ನದ ಬದಲಾಗಿ ಕುಶಲಕ್ಕಿ , ಬಾಯಿಲ್ಡ್ ಅಕ್ಕ್ಕಿ , ಅನ್ ಪಾಲಿಶ್/ಕುಟ್ಟಿದ ಅಕ್ಕಿ ಬಳಸಬೇಕು .

3. ಉತ್ತಮ ನಿದ್ರೆ : ಮನುಷ್ಯನ ಆರೋಗ್ಯ ಸ್ಥಿತಿಗೆ ಸೂಕ್ತ ನಿದ್ರೆಯೂ ಅತ್ಯಗತ್ಯ. ಸಾಕಷ್ಟು ನಿದ್ರೆಯ ಮಹತ್ವದ ಬಗ್ಗೆ ಜನರಲ್ಲಿ ಅನೇಕ ತಪ್ಪು ತಿಳುವಳಿಕೆ ಇದೆ. ಸೂಕ್ತ ಸಮಯದಲ್ಲಿ ನಿದ್ರೆ ಮಾಡುವುದು ಒಳ್ಳೆಯದು. ಬೇಗನೆ ಮಲಗಿ ಬೇಗನೆ ಏಳುವುದು ಉತ್ತಮ ಅಭ್ಯಾಸ. ಆದಾಗ್ಯೂ ಸಾಕಷ್ಟು ನಿದ್ರೆ ಇಲ್ಲದಿದ್ದರೆ ಕೆಲವೊಂದು ತೊಂದರೆಗಳಿಗೆ ಕಾರಣವಾಗುತ್ತದೆ. ಅನಿದ್ರತೆ, ತಲೆನೋವು, ನಿರುತ್ಸಾಹ, ಮಂಕು ಇತ್ಯಾದಿ. ಕೆಲವೊಮ್ಮೆ ಇದು ಬೊಜ್ಜು, ಅಜೀರ್ಣ, ಜ್ಞಾಪಕ ಶಕ್ತಿ ನಷ್ಟದಂಥ ಗಂಭೀರ ಸಮಸ್ಯೆಗಳಿಗೂ ಎಡೆ ಮಾಡಿಕೊಡಬಹುದು.

4 . ನಿರಂತರ ನಿಯಮಿತ ವ್ಯಾಯಾಮ ಕನಿಷ್ಠ ದಿನಕ್ಕೆ 45 ನಿಮಿಷ ಏರೋಬಿಕ್ ಎಕ್ಸರ್ಸೈಜ್ , ನಡಿಗೆ , ವಾರಕ್ಕೆ 3-4 ಸಾವಿರ ಕ್ಯಾಲೋರಿಸ್ ದೈಹಿಕ ಶ್ರಮದ ಮುಖಾಂತರ ವ್ಯಯಸ ಬೇಕು ,

ಹೃದಯಾಘಾತದ ಸಾಮಾನ್ಯ ಲಕ್ಷಣಗಳು :1.ಎದೆನೋವು, ಹೃದಯ ಭಾರವಾಗುವಿಕೆ

2. ಉಸಿರಾಟದಲ್ಲಿ ತೊಂದರೆ, ಕೆಮ್ಮು , ವ್ಹಿಜಿಂಗ್

3. ಮಾನಸಿಕ ಕ್ಷೋಭೆ ಅಥವಾ ಒತ್ತಡದಂಥ ಲಕ್ಷಣಗಳು

4. ಹೊಟ್ಟೆ ,ಹೆಗಲು, ಕುತ್ತಿಗೆ ,ಭುಜ ,ಕೈ ಅಥವಾ ದವಡೆ ನೋವು

5. ಅಸ್ವಸ್ಥತೆ, ಸುಸ್ತು

6. ಕಡಿಮೆ ನಾಡಿಮಿಡಿತ

7. ಅತಿಯಾಗಿ ಬೆವರುವಿಕೆ

8. ವಾಂತಿ, ಅಸಿಡಿಟಿ

9. ತಲೆಸುತ್ತುವಿಕೆ/ಶಿರೋಭ್ರಮಣೆ/ ಜ್ಞಾನ ತಪ್ಪುವುದು

ಹೃದಯಾಘಾತದ ಚಿಹ್ನೆ ಮತ್ತು ಲಕ್ಷಣಗಳಲ್ಲಿ ವ್ಯತ್ಯಾಸಗಳಿರುತ್ತವೆ. ಒಮ್ಮೊಮ್ಮೆ ಈ ಲಕ್ಷಣ ಬಿರುಸಾಗಿದ್ದರೆ, ಕೆಲವೊಮ್ಮೆ ಲಘುವಾಗಿರುತ್ತದೆ. ಕೆಲವು ಸಂದರ್ಭದಲ್ಲಿ ಯಾವುದೇ ಲಕ್ಷಣವಿಲ್ಲದೇ ಅಥವಾ ಲಘು ಲಕ್ಷಣಗಳೊಂದಿಗೆ ಸಂಭವಿಸುವ ಹಾರ್ಟ್ ಅಟ್ಯಾಕ್ ತೀವ್ರ ಎದೆನೋವಿನಂಥ ಮರಣಾಂತಿಕ ಪರಿಣಾಮಗಳಷ್ಟೇ ಅಪಾಯ ತಂದೊಡ್ಡುತ್ತವೆ ಎಂಬುದನ್ನು ಗಮನದಲ್ಲಿಟ್ಟುಕೊಳ್ಳಬೇಕು.

ಹೃದಯಾಘಾತಕ್ಕೆ ಕಾರಣವಾಗುವ ಕೆಲವು ರಿಸ್ಕ್ ಫ್ಯಾಕ್ಟರ್‍ಗಳು:

1 .ತಂಬಾಕು ಸೇವನೆ/ಧೂಮಪಾನ

2. ಅಧಿಕ ಕೊಲೆಸ್ಟರಾಲ್

3. ಅಧಿಕ ಎಲ್‍ಡಿಎಲ್ ಕೊಲೆಸ್ಟರಾಲ್

4. ಕಡಿಮೆ ಎಚ್‍ಡಿಎಲ್ ಕೊಲೆಸ್ಟರಾಲ್

5. ಅಧಿಕ ಬ್ಲಡ್ ಷುಗರ್/ಡಯಾಬಿಟಿಸ್

6. ಅಧಿಕ ರಕ್ತದೊತ್ತಡ

7. ಅಧಿಕ ತೂಕ

8 ದೈಹಿಕ ಶ್ರಮವಿಲ್ಲದ ಜೀವನ

9 ಐಷಾರಾಮಿ ಅಭ್ಯಾಸಗಳು/ಸೇಡೆಂಟರಿ ಲೈಫ್ ಸ್ಟೈಲ್

10 ಉದ್ವೇಗ ಮಾನಸಿಕ, ಉದ್ಯೋಗದ , ನಗರ ಜೀವನದ ಒತ್ತಡಗಳು ಮತ್ತು ಆಯಾಸ

11 ಸಂಸ್ಕರಿಸಿದ ಆಹಾರ/ಜಂಕ್ ಫುಡ್ /ಅತಿಯಾದ ಜಿಡ್ಡು ಪದಾರ್ಥ ಸೇವನೆ

12 ಪರಿಸರ / ಗಾಳಿ ಮಾಲಿನ್ಯ

13 ಅನುವಂಶಿಯ ಅಂಶಗಳು

ಲೇಖಕರು: ಡಾ. ಮಹಾಂತೇಶ ಆರ್. ಚರಂತಿಮಠ. ಹೃದ್ರೋಗ ತಜ್ಞರು ತಥಾಗತ್ ಹಾರ್ಟ್‍ಕೇರ್ ಸೆಂಟರ್, ಬೆಂಗಳೂರು-01

ಜಿಲ್ಲೆ

ರಾಜ್ಯ

error: Content is protected !!