Tuesday, September 17, 2024

ಕುಡಿದು ನಶೆಯಲ್ಲಿ ಬೆಳಗಾವಿಯ ಯುವಕನ ಕೊಲೆ

ಸುದ್ದಿ ಸದ್ದು ನ್ಯೂಸ್

ಬೆಳಗಾವಿ- ಸರಾಯಿ ಕುಡಿದ ನಶೆಯಲ್ಲಿ ಸ್ನೇಹಿತರ ನಡುವೆ ಜಗಳ ನಡೆದು. ಜಗಳ ಕೊಲೆಯಲ್ಲಿ ಅಂತ್ಯವಾದ ಘಟನೆ ರವಿವಾರ ರಾತ್ರಿ ಬೆಳಗಾವಿಯಲ್ಲಿ ನಡೆದಿದೆ.

ಹಳೇ ಬೆಳಗಾವಿ ನಾಕಾ ಬಳಿ ಇದ್ದ ವೈನ್ ಶಾಪ್‌ಗೆ ಗೆಳೆಯರಿಬ್ಬರು ಸರಾಯಿ ಕುಡಿಯಲು ಹೋಗಿದ್ದರು ಈ ವೇಳೆ ಇಬ್ಬರ ನಡುವೆ ಮಾತಿನ ಚಕಮಕಿ ನಡೆದು ಪರಸ್ಪರ ಇಬ್ಬರು ಹೊಡೆದಾಡಿಕೊಂಡಿದ್ದಾರೆ ಹೊಡೆದಾಡುವ ಸಂದರ್ಭದಲ್ಲಿ ಸೂರಜ ಗೌಂಡಿವಾಡಕರ ಅವನ ತೆಲೆಗೆ ಗಾಯವಾಗಿ ಆತ ಸ್ಥಳದಲ್ಲೇ ಅಸ್ವಸ್ಥನಾಗಿದ್ದಾನೆ. ತಕ್ಷಣ ಆತನನ್ನು ಯಳ್ಳೂರ ರಸ್ತೆಯಲ್ಲಿ ಇರುವ ಕೆಎಲ್ಇ ಆಸ್ಪತ್ರೆಗೆ ದಾಖಲು ಮಾಡಲಾಯಿತು. ಚಿಕಿತ್ಸೆ ಫಲಕಾರಿಯಾಗದೆ ಸೂರಜ ಗೌಂಡಿವಾಡಕರ ರಾತ್ರಿ 10 ಗಂಟೆ ಸುಮಾರಿಗೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾನೆ ಎಂದು ಪೊಲೀಸ್ ಮೂಲಗಳಿಂದ ತಿಳಿದು ಬಂದಿದೆ

ಘಟನಾ ಸ್ಥಳಕ್ಕೆ ಶಹಾಪೂರ ಠಾಣೆ ಪೋಲೀಸರು ಆಗಮಿಸಿ ಕೊಲೆಗೆ ಕಾರಣ? ಕೊಲೆ ಮಾಡಿದವರು ಯಾರು ? ಅನ್ನುವುದರ ಬಗ್ಗೆ ಪೋಲೀಸರು ತನಿಖೆ ನಡೆಸಲಿದ್ದಾರೆ.

ಜಿಲ್ಲೆ

ರಾಜ್ಯ

error: Content is protected !!