ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷ ಜನಸ್ಪಂದನ ಕಾರ್ಯಕ್ರಮ 

ಧಾರವಾಡ: ಜಿಲ್ಲೆಯ ಕಲಘಟಗಿ ಪಟ್ಟಣದ ತಹಶೀಲ್ದಾರ ಕಚೇರಿ ಎದುರು ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಜನಸ್ಪಂದನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ತಹಶೀಲ್ದಾರ ಕಚೇರಿಗೆ ಬಂದಂತಹ ಸಾರ್ವಜನಿಕರಿಗೆ ಸಹಾಯ ಮಾಡಲು ಎಂದು ಹಾಗೂ ವಿನಾಕಾರಣ ಅಧಿಕಾರಿಗಳಿಂದ ಆಗುತ್ತಿರುವ ವಿಳಂಬವನ್ನು ಪ್ರಶ್ನಿಸಲು ಮತ್ತು ಹೆಚ್ಚುವರಿ ಹಣ ಕೇಳುವ ಅಧಿಕಾರಿಗಳನ್ನು ಎಚ್ಚರಿಸುವ ಸಂಬಂಧ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷ ಇಡೀ ರಾಜ್ಯಾದ್ಯಂತ ಜನಸ್ಪಂದನ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ ಅದರ ಭಾಗವಾಗಿ ಕಲಘಟಗಿ ತಹಸೀಲ್ದಾರ ಕಚೇರಿಯಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಈ ಸಂದರ್ಭದಲ್ಲಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷ ದ ಧಾರವಾಡ ಜಿಲ್ಲಾಧ್ಯಕ್ಷರಾದ ಸುಮಿತ್ರಾ ಹಳ್ಳಿಕೇರಿ ಉಪಾಧ್ಯಕ್ಷರಾದ ಜಹೀರ ಅಡ್ವಾಣಿ.ಜಿಲ್ಲಾ ಯುವ ಘಟಕದ ಅಧ್ಯಕ್ಷರಾದ ಸಂತೋಷ ಕರಗೂಳಿ. ಕಲಘಟಗಿ ತಾಲೂಕ ಅಧ್ಯಕ್ಷರಾದ ಮಂಜುನಾಥ ಗಂಜಿಗಟ್ಟಿ ತಾಲೂಕ ಯುವ ಘಟಕದ ಅಧ್ಯಕ್ಷರಾದ ಶ್ರೀಧರ ಹಾಗೂ ಪಕ್ಷದ ಇತರೆ ಪದಾಧಿಕಾರಿಗಳು ಹಾಜರಿದ್ದರು.

ವರದಿ: ನಿತಿಶಗೌಡ ತಡಸ

Share This Article
WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

";