ಪಿಎಸ್ಐ ಪರೀಕ್ಷೆಯ ಹಗರಣ ಮಾಸುವ ಮುನ್ನವೇ ಮತ್ತೊಂದು ಹಗರಣ ಬೆಳಕಿಗೆ:ಬೆಳಗಾವಿ ಪೊಲೀಸರಿಂದ ತೀವ್ರ ಶೋಧ

ಗದಗ:. ಪಿಎಸ್ಐ ಪರೀಕ್ಷೆಯ ಹಗರಣ ಮಾಸುವ ಮುನ್ನವೇ ಮತ್ತೊಂದು ಹಗರಣ ಬೆಳಕಿಗೆ ಬಂದಿದೆ. ಕೆಪಿಟಿಸಿಎಲ್ ಕಿರಿಯ ಸಹಾಯಕ ಹುದ್ದೆಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ನೇತೃತ್ವದಲ್ಲಿ ನಡೆದಿದ್ದ ಪರೀಕ್ಷೆ ಪತ್ರಿಕೆ ಲೀಕ್.ಕಲಬುರಗಿಯಲ್ಲಿ ಪಿಎಸ್ಐ ನೇಮಕಾತಿಯಲ್ಲಿ ಭಾರಿ ಅಕ್ರಮ ನಡೆದಿತ್ತು. ಅದೇ ರೀತಿ ಈಗ ರಾಜ್ಯದಲ್ಲಿ ಮತ್ತೊಂದು ಭಾರೀ ಪರೀಕ್ಷಾ ಅಕ್ರಮ ಬಯಲಾಗಿದೆ.

ಹೌದು. ಗದಗದ ಮುನ್ಸಿಪಲ್ ಕಾಲೇಜಿನಲ್ಲಿ ಕೆಪಿಟಿಸಿಎಲ್ ಕಿರಿಯ ಸಹಾಯಕ ಹುದ್ದೆಗಾಗಿ ಪರೀಕ್ಷೆ ನಡೆದಿತ್ತು. ಆದರೆ ಇಲ್ಲಿಯೆ ಈ ಪರೀಕ್ಷಾ ಪತ್ರಿಕೆ ಲೀಕ್ ಆಗಿದೆ. ತಂದೆ-ಮಗ ಸೇರಿಕೊಂಡು ಪ್ರಶ್ನೆ ಪತ್ರಿಕೆ ಲೀಕ್ ಮಾಡಿದ್ದಾರೆ ಎನ್ನಲಾಗುತ್ತಿದೆ. 2022, ಆಗಸ್ಟ್ 7ರ ಭಾನುವಾರದಂದು ಗದಗ-ಬೆಟಗೇರಿ ಅವಳಿ ನಗರದಲ್ಲಿ 21 ಕೇಂದ್ರಗಳಲ್ಲಿ ಪರೀಕ್ಷೆ ನಡೆದಿತ್ತು. ಆ ಪೈಕಿ ಮುನ್ಸಿಪಲ್ ಕಾಲೇಜ್ ನಲ್ಲಿ ಪ್ರಶ್ನೆ ಪತ್ರಿಕೆ ಲೀಕ್ ಆಗಿದೆ.

ಮುನಿಸಿಪಲ್ ಕಾಲೇಜಿನ ಉಪ ಪ್ರಾಚಾರ್ಯ ಮಾರುತಿ ಸೋನಾವನೆ ಮತ್ತು ಅವರ ಮಗ ಸಮೀತ ಕುಮಾರ್ ಪ್ರಶ್ನೆ ಪತ್ರಿಕೆ ಲೀಕ್ ಮಾಡಿದ್ದಾರೆ.ಮಗ ಸಮೀತ ಕುಮಾರ್ ಪತ್ರಕರ್ತನ ಸೋಗಿನಲ್ಲಿ ಪರೀಕ್ಷಾ ಕೇಂದ್ರಕ್ಕೆ ಎಂಟ್ರಿ ಕೊಟ್ಟು ಮೊಬೈಲ್ ಮೂಲಕ ಪ್ರಶ್ನೆ ಪತ್ರಿಕೆ ಸೆರೆ ಹಿಡಿದಿದ್ದಾನೆ. ರಾಜ್ಯದ ಬೇರೆ ಬೇರೆ ಕಡೆ ಪ್ರಶ್ನೆ ಪತ್ರಿಕೆ ಕಳಿಸಿದ್ದಾನೆ ಎಂಬ ಶಂಕೆ ವ್ಯಕ್ತವಾಗಿದೆ.ಪ್ರಶ್ನೆ ಪತ್ರಿಕೆ ಲಿಂಕ್ ಆಗಿರುವ ಜಾಡು ಹಿಡಿದುಕೊಂಡು ಬಂದ ಬೆಳಗಾವಿ ಪೊಲೀಸರು ಭಾರಿ ಶೋಧ ನಡೆಸುತ್ತಿದ್ದಾರೆ.

ಸದ್ಯ ಬೆಳಗಾವಿ ಸೈಬರ್ ಕ್ರೈಮ್ ಪೊಲೀಸರು ಮೊಬೈಲ್ ಗಾಗಿ ತೀವ್ರ ಶೋಧ ನಡೆಸುತ್ತಿದ್ದಾರೆ. ತಂದೆ-ಮಗನನ್ನು ಬಂಧಿಸಿ, ತೀವ್ರ ವಿಚಾರಣೆ ನಡೆಸಲಾಗುತ್ತಿದೆ.

 

 

 

Share This Article
WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

";