Saturday, July 27, 2024

ಪಿ ಆರ್ ಸಿ ಐ ಮಾಧ್ಯಮ ಪ್ರಶಸ್ತಿಗೆ ಆಯ್ಕೆಯಾದ ಶಿವಾನಂದ ತಗಡೂರು

ಬೆಂಗಳೂರು: ಪಬ್ಲಿಕ್ ರಿಲೇಶನ್ಸ್ ಕೌನ್ಸಿಲ್ ಆಫ್ ಇಂಡಿಯಾ (ಪಿ ಆರ್ ಸಿ ಐ) ಕೊಡಮಾಡುವ ಮಾಧ್ಯಮ ಪ್ರಶಸ್ತಿಗೆ ವಿಜಯವಾಣಿ ದಿನಪತ್ರಿಕೆ ವಿಶೇಷ ವರದಿಗಾರ ಮತ್ತು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಅವರು ಆಯ್ಕೆಯಾಗಿದ್ದಾರೆ.

ಕೋವಿಡ್ ಸಂದರ್ಭದಲ್ಲಿ ಮಾಡಿದ ಸೇವೆ ಸ್ಮರಿಸಿ ಈ ಪ್ರಶಸ್ತಿ ನೀಡಲಾಗುತ್ತಿದೆ. ಅಕ್ಟೋಬರ್ 28 ರಂದು ಬೆಂಗಳೂರಿನಲ್ಲಿ ನಡೆಯುವ ವಿಶ್ವ ಸಂವಹನಕಾರರ ದಿನಾಚರಣೆ ಕಾರ್ಯಕ್ರಮದಲ್ಲಿ ಈ ಪ್ರಶಸ್ತಿಯನ್ನು     ಪ್ರಧಾನ ಮಾಡಲಾಗುವುದು ಎಂದು ಪಬ್ಲಿಕ್ ರಿಲೇಶನ್ಸ್ ಕೌನ್ಸಿಲ್ ಆಫ್ ಇಂಡಿಯಾ (ಪಿ ಆರ್ ಸಿ ಐ) ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ.

 

ಜಿಲ್ಲೆ

ರಾಜ್ಯ

error: Content is protected !!