Friday, September 20, 2024

ಹೆಚ್ಚಿನ ಮತಗಳನ್ನು ನಾವು ಪಡೆಯುವುದು ನಿಶ್ಚಿತ:ಸತೀಶ್ ಜಾರಕಿಹೊಳಿ

ಬೆಳಗಾವಿ: ಡಿ.14ರಂದು ಕಾಂಗ್ರೆಸ್ ಪಕ್ಷಕ್ಕೆ ಶುಭ ಸುದ್ದಿ ಬರಲಿದೆ. ಹಾನಗಲ್ ಉಪಚುನಾವಣೆಯಲ್ಲಿ ಬಂದಂತಹ ಫಲಿತಾಂಶವೇ ಬೆಳಗಾವಿ ವಿಧಾನ ಪರಿಷತ್ ಚುನಾವಣೆಯಲ್ಲೂ ಬರಲಿದೆ ಎಂದು ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ.

ಮೊದಲ ದಿನದಿಂದಲೇ ಇಡೀ ಜಿಲ್ಲೆಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ನೇತೃತ್ವದಲ್ಲಿ ಒಗ್ಗಟ್ಟಿನಿಂದ ಪ್ರಚಾರ ಕಾರ್ಯ ನಡೆದಿದೆ. ನಮಗೆ ನಮ್ಮದೇ ಆದ ಮತಗಳಿವೆ. ನಾನು ಚಿಕ್ಕೋಡಿಯಲ್ಲೇ 11 ದಿನ ಇದ್ದು ಪ್ರಚಾರ ಮಾಡಿದ್ದೇನೆ. ಮತದಾರರು ನಿರ್ಧಾರ ಮಾಡಿದ್ದಾರೆ. ಹಾನಗಲ್ ಉಪಚುನಾವಣೆಯ ಫಲಿತಾಂಸವನ್ನೇ ನಾನು ಇಲ್ಲಿಯೂ ಕಾಣುತ್ತೇವೆ ಎಂದರು.

ಪ್ರತಿಯೊಂದು ಚುನಾವಣೆಯೂ ಪ್ರತಿಷ್ಠೆಯೇ. ಬೆಳಗಾವಿ ರಾಜ್ಯದಲ್ಲಿ ಪ್ರಮುಖವಾಗಿದೆ. ಅಧಿವೇಶನ ನಡೆಯುವ ಸಂದರ್ಭದಲ್ಲಿಯೇ ಫಲಿಂತಾಶ ಬರಲಿದ್ದು ಕಾಂಗ್ರೆಸ್ ಗೆ ಶುಭ ಸುದ್ದಿ ಬರಲಿದೆ ಎಂದು ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.KPCC ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಮಾತನಾಡಿ, ಬೇರೆಲ್ಲ ಅಭ್ಯರ್ಥಿಗಳಿಗಿಂತ ಹೆಚ್ಚಿನ ಮತಗಳನ್ನು ನಾವು ಪಡೆಯುವುದು ನಿಶ್ಚಿತ ಎಂದರು.

ಕಾಂಗ್ರೆಸ್ ಮತದಾರರಿದ್ದಾರೆ. ಶಾಸಕರು, ಮಾಜಿ ಶಾಸಕರು ಎಲ್ಲರೂ ಸೇರಿ ಕೆಲಸ ಮಾಡಿದ್ದೇವೆ. ಅವರಲ್ಲಿ ಇಬ್ಬರಲ್ಲಿ ಒಬ್ಬರು ಮಾತ್ರ ಗೆಲ್ಲಬೇಕು. ಮಹಾಂತೇಶ ಕವಟಗಿಮಠ ಅಥವಾ ಲಖನ್ ಜಾರಕಿಹೊಳಿ ಇಬ್ಬರಲ್ಲಿ ಒಬ್ಬರು ಸೋಲುವುದು ನಿಶ್ಚಿತ. ಲಖನ್ ಜಾರಕಿಹೊಳಿ ಬಿಜೆಪಿ ಬಿ ಟೀಂ ಎಂದು ಅವರು ಹೇಳಿದರು

 

ಜಿಲ್ಲೆ

ರಾಜ್ಯ

error: Content is protected !!