Saturday, July 27, 2024

ಗಾಂಜಾ ಮಾರಾಟದ ಆರೋಪಿಗೆ ಜೈಲು ಶಿಕ್ಷೆ

ಧಾರವಾಡ: ಗಾಂಜಾ ಮಾರಾಟ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ 1 ವರ್ಷ ಜೈಲು ಶಿಕ್ಷೆ ಹಾಗೂ 25,000 ರೂ. ದಂಡ ವಿಧಿಸಿ ಧಾರವಾಡದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆದೇಶಿಸಿದೆ. ಸಂಗಮೇಶ ಅಂದಾನಪ್ಪ ಅಂಗಡಿ ಶಿಕ್ಷೆಗೆ ಒಳಗಾದ ಅಪರಾಧಿ.

ಸಂಗಮೇಶ ಅಂದಾನಪ್ಪ 2019ರ ಜುಲೈ 31ರಂದು ಹಾಸ್ಟೆಲ್ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ಕುರಿತು ಖಚಿತ ಮಾಹಿತಿ ಮೇರೆಗೆ ಇನ್ಸ್ಪೆಕ್ಟರ್ ಆನಂದ ಒನಕುದ್ರಿ ನೇತೃತ್ವದಲ್ಲಿ ದಾಳಿ ನಡೆಸಲಾಗಿತ್ತು. ಈ ವೇಳೆ 1,100 ಗ್ರಾಂ ಗಾಂಜಾ ವಶಕ್ಕೆ ಪಡೆದುಕೊಳ್ಳಲಾಗಿತ್ತು.

ಈ ಪ್ರಕರಣ ವಿಚಾರಣೆ ನಡೆಸಿದ ಧಾರವಾಡದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಉಮೇಶ ಮಂಜುನಾಥ ಭಟ್ ಅಡಿಗ ತೀರ್ಪು ನೀಡಿದ್ದಾರೆ.‌ ಇನ್ನು ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕ ಬಿ.ವಿ. ಪಾಟೀಲ ವಾದ ಮಂಡಿಸಿದ್ದರು.

 

ಜಿಲ್ಲೆ

ರಾಜ್ಯ

error: Content is protected !!