Saturday, July 27, 2024

ಅನೈತಿಕ ಸಂಬಂಧಕ್ಕೆ ಬಲಿಯಾದ‌ ಗಂಡ: ಪ್ರಿಯಕರನ ಜೊತೆ ಸೇರಿ ಗಂಡನನ್ನೇ ಕೊಲೆ ಮಾಡಿದ ಪಾಪಿ ಪತ್ನಿ.

ಪ್ರಿಯಕರನ ಜೊತೆ ಸೇರಿಕೊಂಡು ಪತ್ನಿಯೊಬ್ಬಳು ತನ್ನ ಗಂಡನನ್ನೇ ಕೊಲೆ ಮಾಡಿದ ಘಟನೆ ಧಾರವಾಡ ತಾಲೂಕಿನ ಮುಳಮುತ್ತಲ ಗ್ರಾಮದಲ್ಲಿ ಕಳೆದ ದಿನ ತಡ ರಾತ್ರಿ ನಡೆದಿದೆ.‌

ಧಾರವಾಡ:ತಾಲೂಕಿನ ಮುಳಮುತ್ತಲ ಗ್ರಾಮದ ಭೀಮಪ್ಪ ಸಿದ್ಧಣ್ಣವರ ಕೊಲೆಯಾದ‌ ವ್ಯಕ್ತಿಯಾಗಿದ್ದಾನೆ. ಭೀಮಪ್ಪನ ಪತ್ನಿ ಕಾವೇರಿ ಹಾಗೂ ಆಕೆಯ ಪ್ರಿಯಕರ ಶಿವು ನಿಂಬೋಜಿ ಕೂಡಿಕೊಂಡು ಕೊಡಲಿಯಿಂದ ಹೊಡೆದು ಕೊಲೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ.

ಭೀಮಣ್ಣನ ಸತಿ ಕಾವೇರಿ ಮದುವೆಯಾದ ನಂತರವೂ ಶಿವುನ ಜೊತೆ ಅನೈತಿಕ ಸಂಬಂಧ ಹೊಂದಿದ್ದಳಂತೆ. ಇದೇ ಕಾರಣಕ್ಕೆ ಪದೇ ಪದೇ ಮನೆಯಲ್ಲಿ ಜಗಳ ನಡೆಯುತಿತ್ತು. ಹಾಗಾಗಿ ತನ್ನ ಪ್ರಿಯಕರನ ಜೊತೆಗೂಡಿ ಕಾವೇರಿ ತನ್ನ ಪತಿಯನ್ನೇ ಮುಗಿಸಿದ್ದಾಳೆ ಎಂದು ಕೊಲೆಯಾದ ಭೀಮಪ್ಪನ ಕುಟುಂಬಸ್ಥರು ಆರೋಪಿಸುತ್ತಿದ್ದಾರೆ.

ಗ್ರಾಮಸ್ಥರ ಮಾಹಿತಿ ಮೇರೆಗೆ ಸ್ಥಳಕ್ಕೆ‌ ಧಾರವಾಡ ಗರಗ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಕೈಗೊಂಡಿದ್ದು, ಭೀಮಪ್ಪನ ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಧಾರವಾಡ ಜಿಲ್ಲಾ ಆಸ್ಪತ್ರೆಗೆ ರವಾನೆ ಮಾಡಿದ್ದಾರೆ. ಇನ್ನೂ ಘಟನೆ ನಡೆದ ಕೆಲವೇ ಘಂಟೆಗಳಲ್ಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾವೇರಿ ಹಾಗೂ ಪ್ರೀಯಕರ ಶಿವು ನಿಂಬೋಜಿ ಆರೋಪಗಳನ್ನು ಬಂಧಿಸಿ ವಿಚಾರಣೆ ಕೈಗೊಂಡಿದ್ದಾರೆ. ಈ ಕುರಿತು ಗರಗ‌ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.‌

 

ಜಿಲ್ಲೆ

ರಾಜ್ಯ

error: Content is protected !!