Saturday, July 27, 2024

ಇಂದಿನ ಸಮಾಜಕ್ಕೆ ಸುತಾರ ರವರ ಭಾವೈಕ್ಯತೆ ಅತೀ ಅವಶ್ಯ ಕಸಾಪ ಜಿಲ್ಲಾ ಅಧ್ಯಕ್ಷೆ ಮಂಗಲಾ ಮೆಟಗುಡ್ಡ

ಬೆಳಗಾವಿ 13 : ಭಾವೈಕ್ಯತೆಯ ಕೊಂಡಿಯಾಗಿ ತಮ್ಮ ಜೀವನದುದ್ದಕ್ಕೂ ಸಮಾಜದಲ್ಲಿ ಸಾಮರಸ್ಯ ಮೂಡಿಸುವ ನಿಟ್ಟಿನಲ್ಲಿ ತಮ್ಮ ಪ್ರವಚನ, ಹಾಡುಗಳಿಂದ ಶ್ರಮಿಸಿದ ಆಧುನಿಕ ಕನ್ನಡದ ಕಭೀರ ದಿವಂಗತ ಇಬ್ರಾಹಿಂ ಸುತಾರರವರ ಅಗಲಿಕೆ ಈ ನಾಡಿಗೆ ತುಂಬಲಾರದ ನಷ್ಟವುಂಟು ಮಾಡಿದೆ.

ಇವತ್ತಿನ ಸಮಾಜದಲ್ಲಿ ಜಾತಿ ಮತ ಪಂಥಗಳ ಮೇಲೆ ನಡೆಯುತ್ತಿರುವ ಅಹಿತಕರ ಘಟನೆಗಳಿಂದ ದೇಶದ ಸಾಮರಸ್ಯಕ್ಕೆ ಧಕ್ಕೆ ಉಂಟಾಗುತ್ತಿರುವುದು ವಿಷಾಧನೀಯ ಸಂಗತಿಯಾಗಿದೆ.

ಪ್ರಸ್ತುತ ನಮ್ಮ ಸಮಾಜಕ್ಕೆ ದಿವಂಗತ ಇಬ್ರಾಹಿಂ ಸುತಾರರವರು ತೋರಿಸಿಕೊಟ್ಟ ಸಾಮಾಜಿಕ ಧಾರ್ಮಿಕ ಭಾವೈಕ್ಯತೆ ಅತೀ ಅವಶ್ಯವಾಗಿದೆ. ಪ್ರತಿಯೊಬ್ಬರು ಅವರ ಆದರ್ಶ, ಭಾವೈಕ್ಯತೆಯ ನೀತಿಯನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಂಡು ಜಾತ್ಯಾತೀತ ಸದೃಡ ಭಾರತ ದೇಶದ ನಿರ್ಮಾಣಕ್ಕೆ ಸಂಕಲ್ಪ ತೊಡಬೇಕೆಂದು ಕನ್ನಡ ಸಾಹಿತ್ಯ ಪರಿಷತ್ ಬೆಳಗಾವಿ ಜಿಲ್ಲಾ ಅಧ್ಯಕ್ಷೆ ಮಂಗಲಾ ಮೆಟಗುಡ್ಡ ಕರೆ ನೀಡಿದರು.

ದಿವಂಗತ ಪದ್ಮಶ್ರೀ ಇಬ್ರಾಹಿಂ ಸುತಾರರವರ ಜೀವನದ ಸಂದೇಶದ ಕುರಿತಂತೆ ಕನ್ನಡ ಸಾಹಿತ್ಯ ಪರಿಷತ್ ಚಿಕ್ಕೋಡಿ ತಾಲೂಕಾ ಘಟಕದಿಂದ ಆಯೋಜಿಸಲ್ಪಟ್ಟಿದ್ದ ವೆಬಿನಾರದಲ್ಲಿ ಅಧ್ಯಕ್ಷತೆಯನ್ನು ವಹಿಸಿ ಅವರು ಮಾತನಾಡಿದರು.

ಬನಹಟ್ಟಿಯ ಹಿರಿಯ ಸಾಹಿತಿ ಮಲ್ಲಿಕಾರ್ಜುನ ಹುಲಗಬಾಳಿ ಉಪನ್ಯಾಸ ನೀಡುತ್ತಾ ಇಬ್ರಾಹಿಂ ಸುತಾರರವರು ನಮ್ಮ ಕನ್ನಡ ನಾಡಿನ ಹೆಮ್ಮೆಯ ಸುಪುತ್ರರಾಗಿದ್ದು ಪದ್ಮಶ್ರೀ ಪ್ರಶಸ್ತಿ ಪಡೆದಿದ್ದರೂ ಸಹ ಅವರಲ್ಲಿ ಎಳ್ಳಷ್ಟೂ ಅದರ ಬಗ್ಗೆ ಅಹಂಕಾರ ಇರಲಿಲ್ಲ. ತಮ್ಮ ಜೀವಣೂದ್ದಕ್ಕೂ ಸಮಾಜದಲ್ಲಿನ ಜಾತಿ ಮತ ಪಂಥಗಳ ಬೇದಭಾವ ಅಳಿಸಲು ಸಾಕಷ್ಟು ಪ್ರಯತ್ನಪಟ್ಟಿದ್ದರು. ಅವರ ಜೀವನದ ಸರಳತೆ, ಆಚಾರ ವಿಚಾರ, ನೀತಿ ಇಂದಿನ ನಮ್ಮ ಸಮಾಜಕ್ಕೆ ಮಾರ್ಗದಶೀಯಾಗಿದೆ ಎಂದು ಅಭಿಪ್ರಾಯ ಪಟ್ಟು ಅವರ ಜೊತೆಗಿನ ಒಡನಾಟ ಸ್ಮರಿಸಿಕೊಂಡು ಬಾವುಕರಾದರು.

 

ಇತ್ತಿಚೆಗೆ ನಮ್ಮನ್ನಗಲಿದ ಇಬ್ರಾಹಿಂ ಸುತಾರ, ಖ್ಯಾತ ಪ್ರವಚನಕಾರ ಈಶ್ವರ ಮಂಟೂರ, ಹಿನ್ನಲೆ ಗಾಯಕಿ ಲತಾ ಮಂಗೇಶ್ಕರ, ಖ್ಯಾತ ಸಾಹಿತಿ ಚಂಪಾ, ಹಿರಿಯ ಪತ್ರಕರ್ತ ಭೀಮಸೇನ ತೊರಗಲ್, ಸಾಹಿತಿ ಶ್ರೀನಿವಾಸ ಕುಲಕರ್ಣಿ, ಸುನೀತಾ ಮೊರಬದ ರವರಿಗೆ ಬಾವಪೂರ್ಣ ಶೃದ್ದಾಂಜಲಿ ಸಲ್ಲಿಸಲಾಯಿತು.

ಕಾರ್ಯಕ್ರಮದಲ್ಲಿ ಡಾ.ವೆ.ಜಿ.ಕೆಂಪಣ್ಣವರ, ಶ್ರೀಪಾದ ಕುಂಬಾರ, ಮಿಥುನ ಅಂಕಲಿ, ಶಿರಗಾಂವಿ, ಅವಲಕ್ಕಿ ರವರನ್ನು ಸೇರಿದಂತೆ ಅನೇಕ ಸಾಹಿತಿಗಳು ಗಣ್ಯರು ಪಾಲ್ಗೋಂಡಿದ್ದರು.

ಮೊದಲಿಗೆ ಚಿಕ್ಕೋಡಿ ಕೆ.ಎಲ್.ಇ. ತಾಂತ್ರಿಕ ಮಾಹಾವಿದ್ಯಾಲಯದ ಸುಮಿಧಾ ಸದಾಶಿವ ಪ್ರಾರ್ಥನೆಯೊಂದಿಗೆ ಉಪನ್ಯಾಸ ಕಾರ್ಯಕ್ರಮ ಪ್ರಾರಂಭಗೊಂಡಿತು. ಡಾ. ಜಯಶ್ರೀ ನಾಗರಳ್ಳಿ ಸ್ವಾಗತಿಸಿ ಪರಿಚಯಿಸಿದರು. ವೈದ್ಯ ಸಾಹಿತಿ ಡಾ.ದಯಾನಂದ ನೂಲಿ ಪ್ರಸ್ತಾವಿಕವಾಗಿ ಮಾತನಾಡಿದರು. ಕಸಾಪ ಚಿಕ್ಕೋಡಿ ತಾಲೂಕಿನ ಗೌರವ ಕಾರ್ಯದರ್ಶಿ ಪ್ರೋ. ಸಚೀನ ಮೆಕ್ಕಳಿಕೆ ವಂದಿಸಿದರು. ಚಿಕ್ಕೋಡಿ ತಾಲೂಕಾ ಕಸಾಪ ಅಧ್ಯಕ್ಷ ಡಾ.ಸುರೇಶ ಉಕ್ಕಲಿ ಕಾರ್ಯಕ್ರಮ ಸಂಯೋಜಿಸಿದ್ದರು.

 

 

ಜಿಲ್ಲೆ

ರಾಜ್ಯ

error: Content is protected !!