Saturday, July 27, 2024

ಎಸ್​ಐಟಿ ವರದಿಗೆ ಸುಪ್ರೀಂ ತಡೆಯಾಜ್ಞೆ: ಮತ್ತೆ ಸಂಕಷ್ಟದಲ್ಲಿ ರಮೇಶ್ ಜಾರಕಿಹೊಳಿ

ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಸಿ.ಡಿ. ಬಹಿರಂಗ ಪ್ರಕರಣದಲ್ಲಿ ಕರ್ನಾಟಕ ಎಸ್​ಐಟಿ ವರದಿ ಸಲ್ಲಿಕೆಗೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿದೆ. ಸಿಡಿ ಪ್ರಕರಣದ ಬಗ್ಗೆ ತನಿಖೆಗೆ ರಚಿಸಿದ್ದ ಎಸ್​ಐಟಿ ತನಿಖೆ ಪ್ರಶ್ನಿಸಿ, ವಿಶೇಷ ತನಿಖಾ ತಂಡ ರಚನೆ ಸರಿಯಿಲ್ಲವೆಂದು ಬಾಧಿತ ಯುವತಿ ಆಕ್ಷೇಪ ವ್ಯಕ್ತಪಡಿಸಿದ್ದರು.

ದೆಹಲಿ: ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಸಿ.ಡಿ. ಬಹಿರಂಗ ಪ್ರಕರಣದಲ್ಲಿ ಕರ್ನಾಟಕ ಎಸ್​ಐಟಿ ವರದಿ ಸಲ್ಲಿಕೆಗೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿದೆ. ಸಿಡಿ ಪ್ರಕರಣದ ಬಗ್ಗೆ ತನಿಖೆಗೆ ರಚಿಸಿದ್ದ ಎಸ್​ಐಟಿ ತನಿಖೆ ಪ್ರಶ್ನಿಸಿ, ವಿಶೇಷ ತನಿಖಾ ತಂಡ ರಚನೆ ಸರಿಯಿಲ್ಲವೆಂದು ಬಾಧಿತ ಯುವತಿ ಆಕ್ಷೇಪ ವ್ಯಕ್ತಪಡಿಸಿದ್ದರು. ಪ್ರಕರಣದಲ್ಲಿ ಎಸ್​ಐಟಿ ಬಿ ರಿಪೋರ್ಟ್​ ಸಲ್ಲಿಸಲು ಮುಂದಾಗಿತ್ತು. ಇದೀಗ ಸುಪ್ರೀಂ ತಡೆಯಾಜ್ಞೆಯಿಂದ ಮಾಜಿ ಸಚಿವ ರಮೇಶ್ ಜಾರಕಿಹೊಳಿಗೆ ಸಂಕಷ್ಟ ತಪ್ಪಿದ್ದಲ್ಲ ಎನ್ನುವಂತಾಗಿದೆ.

ಮುಖ್ಯಸ್ಥರ ಅನುಪಸ್ಥಿತಿಯಲ್ಲಿ ಸಿ.ಡಿ. ಪ್ರಕರಣದ ತನಿಖೆಗೆ ಅರ್ಜಿದಾರರು ಆಕ್ಷೇಪ ವ್ಯಕ್ತಪಡಿಸಿದ್ದರು. ಸರ್ಕಾರ ಸ್ವಯಂಪ್ರೇರಿತವಾಗಿ ಎಸ್​ಐಟಿ ರಚನೆ ಮಾಡಿಲ್ಲ. ಎಸ್​ಐಟಿ ರಚನೆಗೆ ರಾಜಕೀಯ ಒತ್ತಡ ಹೇರಲಾಗಿದೆ. ಇಂತಹ ಎಸ್​ಐಟಿ ವರದಿ ಆಧರಿಸಿ ವಿಚಾರಣೆ ನಡೆಸುವುದು ತಪ್ಪು.

ಎಸ್​ಐಟಿ ತನಿಖಾ ವರದಿಯ ಮೇಲೆ ನಮಗೆ ನಂಬಿಕೆಯಿಲ್ಲ. ಸಿ.ಡಿ. ಪ್ರಕರಣದಲ್ಲಿ ರಮೇಶ್ ಜಾರಕಿಹೊಳಿ ಪಾತ್ರ ಇಲ್ಲವೆಂದು ಸೆಷನ್ಸ್​ ಕೋರ್ಟ್​ಗೆ ವರದಿ ಸಲ್ಲಿಸಲು ಎಸ್​ಐಟಿ ಮುಂದಾಗಿದೆ. ವರದಿ ಸಲ್ಲಿಸಲು ಎಸ್​ಐಟಿಗೆ ಹೈಕೋರ್ಟ್​ ಸಹ ಸೂಚನೆ ನೀಡಿದೆ. ಇದಕ್ಕೆ ತಾವು ಅಸಮ್ಮತಿ ಸೂಚಿಸುವುದಾಗಿ ಬಾಧಿತ ಯುವತಿ ಸುಪ್ರೀಂ ಕೋರ್ಟ್​ಗೆ ಅಲವತ್ತುಕೊಂಡಿದ್ದರು. ಸಂತ್ರಸ್ತ ಯುವತಿಯ ಮನವಿಯನ್ನು ಪುರಸ್ಕರಿಸಿ, ಎಸ್​ಐಟಿ ವರದಿ ಸಲ್ಲಿಕೆಗೆ ಸುಪ್ರೀಂ ಕೋರ್ಟ್ ಇದೀಗ ತಡೆಯಾಜ್ಞೆ ನೀಡಿದೆ.

ಎಸ್​ಐಟಿ ರಚನೆ ಸರಿಯಿದೆಯೇ ಎಂಬುದನ್ನ ಮೊದಲು ಖಾತರಿ ಪಡಿಸಿಕೊಳ್ಳಿ: ಸುಪ್ರೀಂ ಕೋರ್ಟ್​ 

ಈ ಮಧ್ಯೆ ಎಸ್​ಐಟಿ ರಚನೆ ಸರಿಯಿದೆಯೇ ಎಂದು ಖಾತರಿ ಪಡಿಸಿಕೊಳ್ಳುವಂತೆ ಕರ್ನಾಟಕ ಹೈಕೋರ್ಟ್​ಗೆ ಸುಪ್ರೀಂ ಕೋರ್ಟ್​ ಸೂಚನೆ ನೀಡಿದೆ. ಎಸ್​ಐಟಿ ರಚನೆ ಬಗ್ಗೆ ಹೈಕೋರ್ಟ್​ ತೀರ್ಮಾನಿಸಿದ ಬಳಿಕವಷ್ಟೇ ಸೆಷನ್ಸ್​ ಕೋರ್ಟ್​ನಲ್ಲಿ ಸಿಡಿ ಬಹಿರಂಗ ಪ್ರಕರಣದ ವಿಚಾರಣೆ ನಡೆಯಲಿದೆ. ಸಿ.ಡಿ. ಪ್ರಕರಣದ ವಿಚಾರಣೆ ಮಾರ್ಚ್ 9ರಂದು ಕರ್ನಾಟಕ ಹೈಕೋರ್ಟ್​ನಲ್ಲಿ ನಡೆಯಲಿದೆ

ಜಿಲ್ಲೆ

ರಾಜ್ಯ

error: Content is protected !!