Thursday, July 25, 2024

ಸಚಿವ ಈಶ್ವರಪ್ಪ ಕೇಸರಿ ಧ್ವಜ ಹಾರಿಸುವ ವಿಚಾರ ಖಂಡಿಸಿ ಅಥಣಿಯಲ್ಲಿ ಕಾಂಗ್ರೆಸ್ ಪಕ್ಷದಿಂದ ಪ್ರತಿಭಟನೆ

ಅಥಣಿ: ದೇಹಲಿಯ ಕೆಂಪು ಕೋಟೆ ಮೇಲೆ ಕೇಸರಿ ಧ್ವಜ ಹಾರಿಸುವ ವಿಚಾರಕ್ಕೆ ಕಾಂಗ್ರೆಸ್ ಪಕ್ಷ ಕೆಂಡಾಮಂಡಲಗೊಂಡು ರಾಜ್ಯದ ಪ್ರತಿ ತಾಲೂಕು ಕೇಂದ್ರಗಳಲ್ಲಿ ಪ್ರತಿಭಟನೆಗೆ ಮುಂದಾಗಿದ್ದು ಅಥಣಿಯಲ್ಲಿ ಕಾಂಗ್ರೆಸ್ ಮುಖಂಡ ಗಜಾನನ ಮಂಗಸೂಳಿ ನೇತ್ರತ್ವದಲ್ಲಿ ಪ್ರತಿಭಟನೆ ನಡೆಸಿ ಅಥಣಿ ತಹಸಿಲ್ದಾರ್ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು

ಇದೆ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರು ಹಾಗೂ ನ್ಯಾಯವಾದಿಗಳಾದ ಸುನೀಲ ಸಂಕ ಮಾತನಾಡಿ ಸಚಿವ ಈಶ್ವರಪ್ಪನವರ ಕೇಸರಿ ಧ್ವಜ ಹಾರಿಸುವ ಹೇಳಿಕೆ ರಾಷ್ಟ್ರಕ್ಕೆ ಮಾಡಿದ ಅವಮಾನ ಮತ್ತು ಇದೊಂದು ರಾಷ್ಟ್ರ ವಿರೋಧಿ ಹೇಳಿಕೆ ಆಗಿದ್ದು ತಕ್ಷಣ ಅವರನ್ನ ಸಚಿವ ಸ್ಥಾನದಿಂದ ವಜಾಗೊಳಿಸಬೇಕು ಮತ್ತು ಕಾನೂನು ಚೌಕಟ್ಟಿನಡಿ ಅವರ ಮೇಲೆ ಸೂಕ್ತ ಕ್ರಮ ಕೈಗೊಳ್ಳುವಂತೆ ಸರ್ಕಾರವನ್ನ ಆಗ್ರಹಹಿಸಿದರು

ಇದೆ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ಸತ್ಯಪ್ಪಾ ಬಾಗೆನ್ನವರ, ಎಸ್ ಕೆ ಬುಟಾಳಿ, ಪುರಸಭೆ ಸದಸ್ಯರಾದ ರಾವಸಾಬ ಐಹೊಳೆ,ರಾಹುಲ್ ಮಾಚಕನವರ,ಅನೀಲ ಸುಣಧೊಳಿ, ನ್ಯಾಯವಾದಿ ಶ್ರೀಕಾಂತ್ ಪೂಜೇರಿ ಸೇರಿದಂತೆ ಹಲವರು ಉಪಸ್ಥಿತರಿದ್ದರು

ವರದಿ: ಅಬ್ಬಾಸ ಮುಲ್ಲಾ

ಜಿಲ್ಲೆ

ರಾಜ್ಯ

error: Content is protected !!