Saturday, September 21, 2024

ಬಿಡಿಸಿಸಿ ಬ್ಯಾಂಕ್ ನಿವೃತ್ತ ಪ್ರಬಂಧಕ ಶಿವಪುತ್ರಪ್ಪ ಸಂಗೋಜಿ ನಿಧನ

ಸುದ್ದಿ ಸದ್ದು ನ್ಯೂಸ್

ಚನ್ನಮ್ಮನ ಕಿತ್ತೂರು: ಕಿತ್ರೂರ ನಾಡ ವಿದ್ಯಾವರ್ಧಕ ಸಂಘದ ಉಪಾಧ್ಯಕ್ಷರು ಮತ್ತು ಬಿಡಿಸಿಸಿ ಬ್ಯಾಂಕಿನ ನಿವೃತ್ತ ಪ್ರಬಂಧಕರಾದ ಶಿವಪುತ್ರಪ್ಪ ಮಹಾಂತಪ್ಪ ಸಂಗೋಜಿ (89) ನೇಯ ವಯಸ್ಸಿನಲ್ಲಿ ಹೃದಯಾಘಾತದಿಂದ ನಿಧನರಾದರು.

ಮೃತರು ಪುತ್ರ,ಪುತ್ರಿ,ಸಹೋದರಿಯರು ಮತ್ತು ಅಪಾರ ಬಂಧು ಬಳಗದವರನ್ನು ಅಗಲಿದ್ದಾರೆ. ಮೃತರ ಆತ್ಮಕ್ಕೆ ರಾಜಗುರು ಸಂಸ್ಥಾನ ಕಲ್ಮಠದ ಪೂಜ್ಯ ಮಡಿವಾಳ ರಾಜಯೋಗೀಂದ್ರ ಮಹಾಸ್ವಾಮಿಗಳು,ನಿಚ್ಚಣಕಿಯ ಪೂಜ್ಯ ಪಂಚಾಕ್ಷರಿ ಮಹಾಸ್ವಾಮಿಗಳು,ಕಿನಾವಿವ ಸಂಘದ ಆಡಳಿತ ಚೇರ್ಮನ್ ಎನ್.ಎಸ್.ಹಿರೇಮಠ, ಗೌರವ ಕಾರ್ಯದರ್ಶಿ ಜೆ.ವ್ಹಿ. ವಸ್ತ್ರದ ಮತ್ತು ಆಡಳಿತ ಮಂಡಳಿಯ ಪದಾಧಿಕಾರಿಗಳು, ಸರ್ವ ಸದಸ್ಯರು, ಬಿಡಿಸಿಸಿ ಬ್ಯಾಂಕಿನ ನಿರ್ದೇಶಕ ರಾಜೇಂದ್ರ ಅಂಕಲಗಿ , ಶಿಕ್ಷಣ ಸಂಸ್ಥೆಯ ಸಿಬ್ಬಂದಿ, ವಿಶ್ರಾಂತ ಪ್ರಾಚಾರ್ಯ ಡಾ.ಎಸ್.ಬಿ.ದಳವಾಯಿ ಸೇರಿದಂತೆ ಇನ್ನೂ ಅನೇಕರು ಮೃತರ ಆತ್ಮಕ್ಕೆ ಶಾಂತಿಯನ್ನು ಕೋರಿ ಸಂತಾಪ ಸೂಚಿಸಿದ್ದಾರೆ.

 

ಜಿಲ್ಲೆ

ರಾಜ್ಯ

error: Content is protected !!