Saturday, July 27, 2024

ಬೂದಿಹಾಳ ಪ್ರೌಢಶಾಲೆಯ ವಿದ್ಯಾರ್ಥಿ ಅಭಿಷೇಕ ಗರಗದ ಜಿಲ್ಲಾಮಟ್ಟದ ದಸರಾ ಕ್ರೀಡಾಕೂಟಕ್ಕೆ ಆಯ್ಕೆ

ಬೈಲಹೊಂಗಲ: ಇತ್ತೀಚೆಗೆ ಪಟ್ಟಣದಲ್ಲಿ ನಡೆದ 2022-23 ನೆಯ ಸಾಲಿನ ತಾಲೂಕಾ ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಬೂದಿಹಾಳ ಗ್ರಾಮದ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿ ಅಭಿಷೇಕ ಗರಗದ 1500 ಮೀಟರ್ ಓಟದಲ್ಲಿ ದ್ವಿತೀಯ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾನೆ.

ಮುಖ್ಯಶಿಕ್ಷಕರಾದ ಎನ್.ಆರ್.ಠಕ್ಕಾಯಿ, ಶಿಕ್ಷಕರಾದ ಶ್ರೀಪಾಲ ಚೌಗಲಾ, ಜಗದೀಶ ನರಿ, ಸುನೀಲ ಭಜಂತ್ರಿ, ಶಿವಾನಂದ ಬಳಿಗಾರ, ವೀರೇಂದ್ರ ಪಾಟೀಲ, ರೇಖಾ ಸೊರಟೂರ, ಹೇಮಲತಾ ಪುರಾಣಿಕ, ಎಸ್.ಡಿ.ಎಂ.ಸಿ ಪದಾಧಿಕಾರಿಗಳು ಹಾಗೂ ಗ್ರಾಮಸ್ಥರು ವಿದ್ಯಾರ್ಥಿಯ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ದೈಹಿಕ ಶಿಕ್ಷಣ ಶಿಕ್ಷಕರಾದ ಪ್ರವೀಣ ಗುರುನಗೌಡರ ವಿದ್ಯಾರ್ಥಿಗೆ ಮಾರ್ಗದರ್ಶನ ಮಾಡಿದ್ದರು.

ಜಿಲ್ಲೆ

ರಾಜ್ಯ

error: Content is protected !!