Saturday, July 27, 2024

BREAKING NEWS:ಹೈಕೋರ್ಟ್ ವಿಚಾರಣೆ ಬೆನ್ನಲ್ಲೇ, ಬಿಜೆಪಿ ಹೈಕಮಾಂಡ್‌ ಮಾಜಿ ಸಿಎಂ ‘ಬಿಎಸ್‌ವೈ’ಗೆ ಬ್ರೇಕ್ !

ಬೆಂಗಳೂರು: ರಾಜ್ಯದಲ್ಲಿ ವ್ಯಾಪಕ ಪ್ರವಾಸ ಕೈಗೊಳ್ಳುವ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ನಿರ್ಧಾರಕ್ಕೆ ಬಿಜೆಪಿ ಪಕ್ಷದ ವರಿಷ್ಠರು ಬ್ರೇಕ್ ಹಾಕಿದ್ದಾರೆ. ಸ್ವಂತ ಬಿಎಸ್‌ವೈ ಯಾವುದೇ ಪ್ರವಾಸ ಮಾಡಬಾರದು, ಏನಾದರೂ ಮಾಡುವುದಾದರೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಜೊತೆಗೆ ಮಾಡಬೇಕು ಎಂದು ಆದೇಶಿಸಿದ್ದಾರೆ ಎನ್ನಲಾಗಿದೆ. ಪಕ್ಷದ ರಾಜ್ಯಾಧ್ಯಕ್ಷ ನಳಿನಿಕುಮಾರ್ ಕಟೀಲ್ ಅವರ ಅಧ್ಯಕ್ಷತೆಯಲ್ಲಿ ಪಕ್ಷದ ಪ್ರವಾಸಗಳಲ್ಲಿ ಭಾಗವಹಿಸಲು ಸೂಚಿಸಲಾಗಿದೆ ಎಂದು ಉನ್ನತ ಮೂಲಗಳಿಂದ ಕೇಳಿಬರುತ್ತಿದೆ.

2023ರ ವಿಧಾನಸಭಾ ಚುನಾವಣೆಯನ್ನ ಗಮನದಲ್ಲಿಟ್ಟುಕೊಂಡು ರಾಜ್ಯದ 104 ವಿಧಾನಸಭಾ ಕ್ಷೇತ್ರಗಳಲ್ಲಿ ಪ್ರವಾಸ ಮಾಡಲು ಬಿಎಸ್‌ವೈ ನಿರ್ಧರಿಸಿದ್ದಾರೆ. ಇದಕ್ಕಾಗಿ ಎಲ್ಲ ವ್ಯವಸ್ಥೆಗಳು ಬಹುತೇಕ ಪೂರ್ಣಗೊಂಡಿವೆ. ಆದರೆ ಇತ್ತೀಚಿನ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ತನಿಖೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಕೋರ್ಟ್‌ನ ತೀರ್ಪುಗಳು ಬದಲಾಗಿವೆ. ಈ ವೇಳೆ ಯಡಿಯೂರಪ್ಪ ಅವರನ್ನು ಒಬ್ಬರನ್ನೆ ಎಲ್ಲಿಗೂ ಕಳುಹಿಸದಿರಲು ಪಕ್ಷ ನಿರ್ಧರಿಸಿದೆ ಎನ್ನಲಾಗುತ್ತಿದೆ.

ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ದಿನದಿಂದಲೂ ಯಡಿಯೂರಪ್ಪ ರಾಜ್ಯದಲ್ಲಿ ವಿಶೇಷ ಪ್ರವಾಸ ಮಾಡಿ ಪಕ್ಷವನ್ನ ಬಲಪಡಿಸುವುದಾಗಿ ಘೋಷಿಸುತ್ತಲೇ ಬಂದಿದ್ದಾರೆ. ಇದಕ್ಕೆ ವರಿಷ್ಠರು ಬ್ರೇಕ್ ಹಾಕುತ್ತಲೇ ಇದ್ದಾರೆ. ಇತ್ತೀಚೆಗಷ್ಟೇ ನಡೆದ ಕೋರ್ ಕಮಿಟಿಯಲ್ಲಿ ಚುನಾವಣೆ ಹಿನ್ನೆಲೆ ಪಕ್ಷದಲ್ಲಿ ಹುರುಪು ತುಂಬುವ ನಿಟ್ಟಿನಲ್ಲಿ ಪ್ರಮುಖ ನಾಯಕರು ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಲ್ಲಿ ಮೂರು ಗುಂಪುಗಳಾಗಿ ಪ್ರವಾಸ ಕೈಗೊಳ್ಳಬೇಕು ಎಂದು ಉಲ್ಲೇಖಿಸಲಾಗಿದೆ.

ಒಂದು ತಂಡವನ್ನ ಸಿಎಂ ಬೊಮ್ಮಾಯಿ, ಇನ್ನೊಂದು ತಂಡವನ್ನ ಪಕ್ಷದ ರಾಜ್ಯಾಧ್ಯಕ್ಷ ನಳೀನ್‌ ಕುಮಾರ್ ಕಟೀಲ್, ಮೂರನೇ ತಂಡವನ್ನ ಪಕ್ಷದ ರಾಷ್ಟ್ರೀಯ ಸಂಸದೀಯ ಮಂಡಳಿ ಸದಸ್ಯ ಮಾಜಿ ಸಿಎಂ ಯಡಿಯೂರಪ್ಪ ನೇತೃತ್ವ ವಹಿಸಬೇಕು ಎಂದು ಆರಂಭದಲ್ಲಿ ನಿರ್ಧರಿಸಲಾಗಿತ್ತು. ರಾಜ್ಯದಲ್ಲಿನ ಇತ್ತೀಚಿನ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಮುಖ್ಯಮಂತ್ರಿ ಬೊಮ್ಮಾಯಿ ಮತ್ತು ಪಕ್ಷದ ಮುಖಂಡ ಕಟೀಲ್‌ ಅವರ ಭೇಟಿಗೆ ಯಾವುದೇ ನಿರ್ಬಂಧಗಳಿಲ್ಲ. ಆದರೆ ಯಡಿಯೂರಪ್ಪ ಅವರ ಭೇಟಿಗೆ ಬ್ರೇಕ್ ಹಾಕಲಾಗಿದೆ. ಮೂರು ತಂಡಗಳನ್ನ ಎರಡಕ್ಕೆ ಇಳಿಸುವ ಮೂಲಕ ನಾಯಕತ್ವ ಸೂಚನೆ ನೀಡಿದೆ ಎಂದು ಉನ್ನತ ಮೂಲಗಳಿಂದ ತಿಳಿದುಬಂದಿದೆ.

ಜಿಲ್ಲೆ

ರಾಜ್ಯ

error: Content is protected !!