Wednesday, July 24, 2024

ಸಾಲು ಸಾಲು ಹಬ್ಬಕ್ಕೆ ಕೇಂದ್ರದಿಂದ ಬಂಪರ್ ಕೊಡುಗೆ; ಅಡುಗೆ ಎಣ್ಣೆ ಮೇಲಿನ ಆಮದು ಸುಂಕ ಕಡಿತ!

ನವದೆಹಲಿ(ಅ.10): ಖಾದ್ಯ ತೈಲ ದರ ಇಳಿಸಲು 11,040 ಕೋಟಿ ಹೂಡಿಕೆ ಮಾಡಿದ ಕೇಂದ್ರ ಸರಕಾರ.

ಪೆಟ್ರೋಲ್, ಡೀಸೆಲ್ ಬೆಲೆಗೆ ಜನರು ತತ್ತರಿಸಿದ್ದಾರೆ.
ದೇಶದಲ್ಲಿ ಎಲ್ಲಾ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗುತ್ತಿದೆ.ಇದರ ನಡುವೆ ಅಡುಗೆ ಎಣ್ಣೆ ಸೇರಿದಂತೆ ಖಾದ್ಯ ತೈಲ ಎಣ್ಣೆ ಬೆಲೆ ನಿಯಂತ್ರಣಕ್ಕೆ ಕೇಂದ್ರ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ.  ಆಹಾರ ಮತ್ತು ಸಾರ್ವಜನಿಕ ಪಡಿತರ ಇಲಾಖೆ 2022ರ ಮಾರ್ಚ್ 31ರ ವರೆಗಿನ ಅವಧಿಗೆ ಖಾದ್ಯ ತೈಲ ಮತ್ತು ಎಣ್ಣೆ ಬೀಜಗಳ ದಾಸ್ತಾನು ಮಿತಿ ಮೇಲೆ ನಿರ್ಬಂಧ ಹೇರಿದೆ.

ಭವಿಷ್ಯದ ವ್ಯಾಪಾರದಲ್ಲಿ ಸಾಸಿವೆ ಎಣ್ಣೆ ಮತ್ತು ಎಣ್ಣೆ ಬೀಜಗಳನ್ನು ಎನ್ ಸಿ ಡಿ ಇ ಎಕ್ಸ್ ( ರಾಷ್ಟ್ರೀಯ ಸರಕು ಮತ್ತು ಉತ್ಪನ್ನಗಳ ವಿನಿಮಯ ಲಿಮಿಟೆಡ್) ನಿಂದ ಅಮಾನತು ಮಾಡಲಾಗಿದ್ದು, ಅದು 2021ರ ಅಕ್ಟೋಬರ್ 8 ರಿಂದ ಜಾರಿಗೆ ಬಂದಿದೆ.ಇನ್ನೂ ಪರವಾನಗಿಗಳ ಅಗತ್ಯತೆಗಳನ್ನು ತೆಗೆದು ಹಾಕುವುದು, ದಾಸ್ತಾನು ಮಿತಿ ಮತ್ತು ನಿರ್ದಿಷ್ಟ ಆಹಾರ ಉತ್ಪನ್ನಗಳ ಸಾಗಾಣೆಗೆ ನಿರ್ಬಂಧ 2021 ಸೆಪ್ಟೆಂಬರ್ 8 ರಿಂದ ಅನ್ವಯವಾಗುವಂತೆ 2021ರ ತಿದ್ದುಪಡಿ ಆದೇಶ ಅನ್ನು ತಕ್ಷಣದಿಂದ ಜಾರಿಗೆ ಬರುವಂತೆ ಆದೇಶ ಹೊರಡಿಸಿದೆ.

ಖಾದ್ಯ ತೈಲಗಳ ಬೆಲೆಯನ್ನು ದೇಶೀಯವಾಗಿ ಮತ್ತಷ್ಟು ತಗ್ಗಿಸುವ ನಿಟ್ಟಿನಲ್ಲಿ ನಿರಂತರ ಪ್ರಯತ್ನಗಳನ್ನು ನಡೆಸುತ್ತಿದ್ದು, ಕೇಂದ್ರ ಸರ್ಕಾರ ಹೊರಿಡಿಸಿರುವ ಈ ಆದೇಶವನ್ನು ಎಲ್ಲ ರಾಜ್ಯಗಳೊಂದಿಗೆ ಹಂಚಿಕೊಳ್ಳಲಾಗಿದೆ.

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಖಾದ್ಯ ತೈಲಗಳ ಬೆಲೆ ಏರಿಕೆಯಾಗಿರುವುದು ದೇಶೀಯವಾಗಿ ಖಾದ್ಯ ತೈಲಗಳ ಬೆಲೆ ಮೇಲೂ ಗಮನಾರ್ಹ ಪರಿಣಾಮ ಬೀರಿದೆ. ಗೌರವಾನ್ವಿತ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ದೂರದೃಷ್ಟಿಯ ನಾಯಕತ್ವದಲ್ಲಿ ಭಾರತ ಸರ್ಕಾರ ಖಾದ್ಯ  ತೈಲದಂತಹ  ಅಗತ್ಯ ವಸ್ತುಗಳ ಬೆಲೆಗಳನ್ನು ನಿಯಂತ್ರಿಸಲು ಬಹುಹಂತದ ಕಾರ್ಯತಂತ್ರವನ್ನು  ರೂಪಿಸಿದೆ. ಆಮದು ಸುಂಕ ವ್ಯವಸ್ಥೆ  ಏಕರೂಪಗೊಳಿಸುವುದು, ನಾನಾ ದಾಸ್ತಾನುಗಾರರು ತಮ್ಮ ಬಳಿ ಹೊಂದಿರುವ ದಾಸ್ತಾನುಗಳನ್ನು ಸ್ವಯಂ ಘೋಷಣೆ ಮಾಡಿಕೊಳ್ಳಲು ವೆಬ್ ಪೋರ್ಟಲ್ ಆರಂಭ ಸೇರಿದಂತೆ ಹಲವು ಕ್ರಮಗಳನ್ನು ಕೈಗೊಳ್ಳಲಾಗಿದೆ.

ಕೇಂದ್ರದ ಈ ನಿರ್ಧಾರದಿಂದ ದೇಶೀಯ ಮಾರುಕಟ್ಟೆಯಲ್ಲಿ ಖಾದ್ಯ ತೈಲಗಳ ಬೆಲೆ ಮತ್ತಷ್ಟು ಕುಸಿತವಾಗಲಿದೆ. ಆ ಮೂಲಕ ದೇಶಾದ್ಯಂತ ಗ್ರಾಹಕರಿಗೆ ಇನ್ನೂ ಹೆಚ್ಚಿನ ನಿರಾಳತೆ ದೊರಕಲಿದೆ

ರಾಜ್ಯ ಸರ್ಕಾರಗಳು ಮತ್ತು ಕೇಂದ್ರಾಡಳಿತ ಪ್ರದೇಶದ ಆಡಳಿತಗಾರರು ಖಾದ್ಯ ತೈಲ ಮತ್ತು ಎಣ್ಣೆ ಬೀಜಗಳ ದಾಸ್ತಾನನ್ನು ನಿರಂತರವಾಗಿ ಘೋಷಿಸುವುದನ್ನು ಖಾತ್ರಿಪಡಿಸಬೇಕಾಗಿದೆ ಮತ್ತು ಆ ಕುರಿತ ಮಾಹಿತಿಯನ್ನು ಇಲಾಖೆಯ ಪೋರ್ಟಲ್ ಅಂದರೆ ಆಹಾರ ಮತ್ತು ಸಾರ್ವಜನಿಕ ಪಡಿತರ ವಿತರಣಾ ಇಲಾಖೆ ಪೋರ್ಟಲ್ ನಲ್ಲಿ (https://evegoils.nic.in/EOSP/login)ಅಪ್ ಡೇಟ್ ಮಾಡಬೇಕು

ಈ ಆದೇಶದಡಿ ಖಾದ್ಯ ತೈಲಗಳು ಮತ್ತು ಎಣ್ಣೆ ಬೀಜಗಳ ದಾಸ್ತಾನು ಮಿತಿಯನ್ನು ಆಯಾ ರಾಜ್ಯ ಸರ್ಕಾರಗಳು ಮತ್ತು ಕೇಂದ್ರ ಸರ್ಕಾರಗಳು ನಿರ್ಧರಿಸಲಿವೆ. ಅವು ಆಯಾ ರಾಜ್ಯಗಳು/ ಕೇಂದ್ರಾಡಳಿತ ಪ್ರದೇಶಗಲ್ಲಿನ ಬಳಕೆ ಮತ್ತು ಲಭ್ಯವಿರುವ ದಾಸ್ತಾನು ಆಧರಿಸಿ, ಈ ಕೆಳಗಿನವುಗಳನ್ನು ಹೊರತುಪಡಿಸಿ ನಿರ್ಧಾರಗಳನ್ನು ಕೈಗೊಳ್ಳಲಿವೆ:

:-ವಿದೇಶಿ ವ್ಯಾಪಾರ ನಿರ್ದೇಶನಾಲಯದಿಂದ ಕೋಡ್ ನಂಬರ್ ಪಡೆದಿರುವ ಆಮದುದಾರರು – ರಫ್ತುದಾರರು, ಸಂಸ್ಕರಣದಾರರು, ಕಾರ್ಖಾನೆಗಳ ಮಾಲಿಕರು, ಎಣ್ಣೆ ತೆಗೆಯುವವರು, ಸಗಟು ಮತ್ತು ಚಿಲ್ಲರೆ ಮಾರಾಟಗಾರರು ಅಥವಾ ಡೀಲರ್ ಗಳು ತಮ್ಮ ಇಡೀ ರಫ್ತು ಮಾಡಲಿರುವ ಖಾದ್ಯ ತೈಲ ಮತ್ತು ಎಣ್ಣೆ ಬೀಜಗಳ ಪ್ರಮಾಣ  ರಫ್ತು ದಾಸ್ತಾನು ಮಿತಿಯ ವ್ಯಾಪ್ತಿಯಲ್ಲಿದೆ ಎಂದು ನಿರೂಪಿಸಿದಾಗ.

:-ಆಮದುದಾರರು, ಸಂಸ್ಕರಣೆದಾರರು, ಕಾರ್ಖಾನೆ ಮಾಲಿಕರು, ಎಣ್ಣೆ ತೆಗೆಯುವವರು, ಸಗಟು ಮತ್ತು ಚಿಲ್ಲರೆ ಮಾರಾಟಗಾರರು ಅಥವಾ ಡೀಲರ್ ಗಳು ಅಥವಾ ಆಮದುದಾರರು ಖಾದ್ಯ ತೈಲ ಮತ್ತು ಎಣ್ಣೆ ಬೀಜಗಳಿಗೆ ಸಂಬಂಧಿಸಿದಂತೆ ಇಡೀ ಪ್ರಮಾಣ ಆಮದು ಮೂಲದಿಂದ ಪಡೆದಿರುವುದು ಎಂಬುದನ್ನು ನಿರೂಪಿಸಬೇಕು.

ಒಂದು ವೇಳೆ ಸಂಬಂಧಿಸಿದ ಕಾನೂನುಬದ್ಧ ಸಂಸ್ಥೆಗಳು ನಿಗದಿಗಿಂತ ಹೆಚ್ಚಿನ ದಾಸ್ತಾನನ್ನು ಹೊಂದಿದ್ದರೆ ಅವುಗಳು ಆ ಕುರಿತು ಆಹಾರ ಮತ್ತು ಸಾರ್ವಜನಿಕ ವಿತರಣಾ ಇಲಾಖೆಯ (https://evegoils.nic.in/EOSP/login) ಪೋರ್ಟಲ್ ನಲ್ಲಿ ಘೋಷಣೆ ಮಾಡಿಕೊಳ್ಳಬೇಕು ಮತ್ತು ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳು ನಿರ್ಧರಿಸಿದ ದಾಸ್ತಾನು ಮಿತಿಯೊಳಗೆ ತಂದುಕೊಳ್ಳಬೇಕು. ಈ ಕಾರ್ಯ ಸಂಬಂಧಿಸಿದ ಅಧಿಕಾರಿಗಳು ಆದೇಶ ಹೊರಡಿಸಿದ 30 ದಿನಗಳಲ್ಲಿ ಕೆಲಸ ಮಾಡಬೇಕು

ಜಿಲ್ಲೆ

ರಾಜ್ಯ

error: Content is protected !!