Thursday, September 19, 2024

ದಾಖಲೆ ಇಲ್ಲದ ಎರಡು ಕೋಟಿ ಹಣ ವಶಕ್ಕೆ ಪಡೆದ ಬೆಳಗಾವಿ ಜಿಲ್ಲಾಧಿಕಾರಿ

ಹಿರೇಬಾಗೇವಾಡಿ: ಖಾಸಗಿ ಬಸ್‌ನಲ್ಲಿ
ದಾಖಲೆ ಇಲ್ಲದೆ ಸಾಗಿಸುತ್ತಿದ್ದ 2 ಕೋಟಿ ಹಣವನ್ನು ಹಿರೇಬಾಗೇವಾಡಿ ಟೋಲ್ ಗೇಟ್‌ನಲ್ಲಿ ಬುಧವಾರ ಬೆಳಗಿನ ಜಾವ 3.30ಕ್ಕೆ  ಬೆಳಗಾವಿ ಜಿಲ್ಲಾಧಿಕಾರಿ ತಂಡ  ವಶಕ್ಕೆ ಪಡೆದಿದ್ದಾರೆ.

ಮುಂಬೈಯಿಂದ ಬೆಂಗಳೂರಿಗೆ ಹೊರಟಿದ್ದ ಖಾಸಗಿ ಬಸ್ ಅನ್ನು ಚುನಾವಣಾ ಎಫ್‌ಎಸ್‌ಟಿ ಹಾಗೂ ಪೊಲೀಸ್ ಅಧಿಕಾರಿಗಳ ತಂಡ ಜಂಟಿಯಾಗಿ ಪರಿಶೀಲಿಸಿದಾಗ ಅಕ್ರಮ ಹಣ ಪತ್ತೆಯಾಗಿದೆ. ಹಿರೇಬಾಗೇವಾಡಿಗೆ ಭೇಟಿ ನೀಡಿ ಪರಿಶೀಲಿಸಿದ ಜಿಲ್ಲಾಧಿಕಾರಿ ನಿತೇಶ್ ಪಾಟೀಲ, ‘ಈ ಅಕ್ರಮಕ್ಕೆ ಸಂಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದು, ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿದೆ. ಓರ್ವ ಆರೋಪಿ ವಶಕ್ಕೆ ಪಡೆಯಲಾಗಿದೆ’ ಎಂದರು.

ಅಪರಾಧ ಮತ್ತು ಸಂಚಾರ ವಿಭಾಗದ ಡಿಸಿಪಿ ಸ್ನೇಹಾ, ಗ್ರಾಮೀಣ ಎಸಿಪಿ ಗೋಪಾಲಕೃಷ್ಣ ಗೌಡರ, ಬೆಳಗಾವಿ
ಗ್ರಾಮೀಣ ಕ್ಷೇತ್ರದ ಚುನಾವಣಾಧಿಕಾರಿ ರಾಜಶೇಖರ ಡಂಬಳ, ಸಿಪಿಐ ಅಮರೇಶ್, ಎಫ್.ಎಸ್.ಟಿ. ತಂಡದ ಮುಖ್ಯಸ್ಥ ಶಂಭುಲಿಂಗಪ್ಪ, ರಾಜೇಂದ್ರ ಮೊರಬದ ಇದ್ದರು.

ಜಿಲ್ಲೆ

ರಾಜ್ಯ

error: Content is protected !!