Saturday, July 27, 2024

ತಾಲೂಕಾ ವೈದ್ಯಾಧಿಕಾರಿಯಿಂದ ಆಸ್ಪತ್ರೆ ಸಿಬ್ಬಂದಿ ಮೇಲೆ ಅತ್ಯಾಚಾರಕ್ಕೆ ಯತ್ನ: ಧರ್ಮದೇಟು ನೀಡಿ, ಪೊಲೀಸರಿಗೆ ಒಪ್ಪಿಸಿದ ಸ್ಥಳೀಯರು

ಚಿಕ್ಕಮಗಳೂರು : ಆಸ್ಪತ್ರೆಯ ಸಿಬ್ಬಂದಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ತಾಲೂಕಾ ವೈದ್ಯಾಧಿಕಾರಿಯನ್ನು (ಟಿಹೆಚ್​ಒ) ಸ್ಥಳೀಯರು ಹಿಡಿದು ಥಳಿಸಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್.ಪುರ ತಾಲೂಕಿನಲ್ಲಿ ನಡೆದಿದೆ.

ಆಸ್ಪತ್ರೆಯ ಮಹಿಳಾ ಸಿಬ್ಬಂದಿಯನ್ನು ವರ್ಗಾವಣೆ ವಿಚಾರವಾಗಿ ತಾಲೂಕಾ ವೈದ್ಯಾಧಿಕಾರಿ ಡಾ.ಎಲ್ಡೋಸ್ ಟಿ.ವರ್ಗೀಸ್ ಎನ್ನುವಾತ ಮಾತನಾಡಲು ತಾನು ವಾಸವಿದ್ದ ಕ್ವಾಟ್ರಸ್​ಗೆ ಕರೆಯಿಸಿಕೊಂಡು ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಆದ್ರೆ, ಮಹಿಳಾ ಸಿಬ್ಬಂದಿ ಅಲ್ಲಿಂದ ತಪ್ಪಿಸಿಕೊಂಡು ಆಚೆ ಬಂದು ಸ್ಥಳೀಯರಿಗೆ ಹೇಳಿದ್ದಾರೆ. ಬಳಿಕ ಸ್ಥಳೀಯರು ಹೋಗಿ ಟಿಹೆಚ್​ಒ ಡಾ.ಎಲ್ಡೋಸ್ ಟಿ.ವರ್ಗೀಸ್ ಧರ್ಮದೇಟು ನೀಡಿ ಬಳಿಕ ಪೊಲೀಸರಿಗೆ ಒಪ್ಪಿಸಿದ್ದಾರೆ.

ಎನ್.ಆರ್.ಪುರ ಸರ್ಕಾರಿ ಆಸ್ಪತ್ರೆಯ ಡಿ ದರ್ಜೆ ಮಹಿಳಾ ಸಿಬ್ಬಂದಿ ಇತ್ತೀಚೆಗೆ ಕಳಸ ಆಸ್ಪತ್ರೆಗೆ ವರ್ಗಾವಣೆಯಾಗಿದ್ದರು. ಈ ಸಂಬಂಧ ಮಾತನಾಡುವ ಬಗ್ಗೆ ಸರ್ಕಾರಿ ನಿವಾಸಕ್ಕೆ ಕರೆಯಿಸಿಕೊಂಡು ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಇನ್ನು ತಾಲೂಕಾ ವೈದ್ಯಾಧಿಕಾರಿ ಡಾ.ಎಲ್ಡೋಸ್ ಟಿ.ವರ್ಗೀಸ್, ಡಿ ದರ್ಜೆ ನೌಕರಳ ಜೊತೆ ಅಸಭ್ಯವಾಗಿ ಮಾತನಾಡಿದ ಆಡಿಯೋ, ವಾಟ್ಸಪ್ ಸ್ಕ್ರೀನ್ ಶಾಟ್ ಮಾದ್ಯಮಗಳಿಗೆ ಲಭ್ಯವಾಗಿವೆ. ಇನ್ನು ಈ ಸಂಬಂಧ ಬಾಳೆಹೊನ್ನೂರು ಠಾಣೆಯ ಪೊಲೀಸರು ಎನ್ ಅರ್ ಪುರ ತಾಲೂಕು ವೈದ್ಯಧಿಕಾರಿ ಡಾ.ಎಲ್ಡೋಸ್ ಟಿ.ವರ್ಗೀಸ್ ನನ್ನು ಬಂಧಿಸಿದ್ದು, ಅತ್ಯಾಚಾರಕ್ಕೆ ಯತ್ನ ಪ್ರಕರಣ ದಾಖಲಿಸಿಕೊಂಡು ವಿಚಾರಣೆ ನಡೆಸಿದ್ದಾರೆ.

ಕೃಪೆ:ಟಿವಿ9

ಜಿಲ್ಲೆ

ರಾಜ್ಯ

error: Content is protected !!