Saturday, September 21, 2024

ಸುದ್ದಿ-ಸದ್ದು ನ್ಯೂಸ್

ಸಲಾಂ ರಾಕಿ ಭಾಯ್ ವಿಡಿಯೋ ಸಾಂಗ್’ ಬಿಡುಗಡೆ

ಬೆಂಗಳೂರು : ರಾಕಿಂಗ್ ಸ್ಟಾರ್ ಯಶ್ ಅವರ ಕೆಜಿಎಫ್ 1 ಮಾಡಿದ ಅಬ್ಬರ ನಮ್ಮೆಲ್ಲರಿಗೂ ಗೊತ್ತಿದೆ. ‌ಇದೀಗ ಪಾರ್ಟ್ 2 ಮೂಲಕ ಅದೇ ಅಬ್ಬರ ಮುಂದುವರಿಸೋಕೆ ರಾಕಿ ಭಾಯ್ ಸಜ್ಜಾಗಿದ್ದು, ಅದಕ್ಕೆ ಮುನ್ನಡಿಯಾಗಿ ಹೊಂಬಾಳೆ ಪ್ರೊಡಕ್ಷನ್ 'ಸಲಾಂ ರಾಕಿ ಭಾಯ್ ವಿಡಿಯೋ ಸಾಂಗ್' ಅನ್ನು ಬಿಡುಗಡೆ ಮಾಡಿದೆ. 'ತಡೆಯೋಕೆ ಇವನನ್ನ ತರಬೇಕು ಎಲ್ಲಿಂದ ಸೈನ್ಯಾನ? ತಡೆಯೋಕೆ...

ಮೊಟ್ಟೆ ವಿತರಣೆ ಕೈಬಿಡದಿರಲು ಒತ್ತಾಯಿಸಿ ಪ್ರತಿಭಟನೆ

ಹುಬ್ಬಳ್ಳಿ: ಯಾವುದೇ ಬೆದರಿಕೆಯ ಒತ್ತಡಕ್ಕೆ ಮಣಿಯದೇ ಅಪೌಷ್ಟಿಕತೆ ನಿರ್ಮೂಲನೆಗಾಗಿ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ವಿತರಿಸುತ್ತಿರುವ ಮೊಟ್ಟೆ ಯೋಜನೆಯನ್ನು ವಾರಪೂರ್ತಿ ವಿಸ್ತರಿಸಿ ವಿತರಿಸುವಂತೆ ಆಗ್ರಹಿಸಿ ನಗರದ ತಹಶಿಲ್ದಾರ ಕಛೇರಿ ಬಳಿ ಸಮತಾ ಸೇನಾ ರಾಜ್ಯಾಧ್ಯಕ್ಷ ಹಾಗೂ ವಿವಿಧ ದಲಿತ ಸಂಘ-ಸಂಸ್ಥೆಗಳ ಮಹಾಮಂಡಳದ ಗುರುನಾಥ ಉಳ್ಳಿಕಾಶಿ ಅವರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ಸರ್ಕಾರಿ ಶಾಲೆಯಲ್ಲಿ ಮೊಟ್ಟೆ ವಿತರಣೆ ಯೋಜನೆಯನ್ನು ಯಾವುದೇ...

ಅನೈತಿಕ ಸಂಬಂಧಕ್ಕೆ ಬಲಿಯಾದ‌ ಗಂಡ: ಪ್ರಿಯಕರನ ಜೊತೆ ಸೇರಿ ಗಂಡನನ್ನೇ ಕೊಲೆ ಮಾಡಿದ ಪಾಪಿ ಪತ್ನಿ.

ಪ್ರಿಯಕರನ ಜೊತೆ ಸೇರಿಕೊಂಡು ಪತ್ನಿಯೊಬ್ಬಳು ತನ್ನ ಗಂಡನನ್ನೇ ಕೊಲೆ ಮಾಡಿದ ಘಟನೆ ಧಾರವಾಡ ತಾಲೂಕಿನ ಮುಳಮುತ್ತಲ ಗ್ರಾಮದಲ್ಲಿ ಕಳೆದ ದಿನ ತಡ ರಾತ್ರಿ ನಡೆದಿದೆ.‌ ಧಾರವಾಡ:ತಾಲೂಕಿನ ಮುಳಮುತ್ತಲ ಗ್ರಾಮದ ಭೀಮಪ್ಪ ಸಿದ್ಧಣ್ಣವರ ಕೊಲೆಯಾದ‌ ವ್ಯಕ್ತಿಯಾಗಿದ್ದಾನೆ. ಭೀಮಪ್ಪನ ಪತ್ನಿ ಕಾವೇರಿ ಹಾಗೂ ಆಕೆಯ ಪ್ರಿಯಕರ ಶಿವು ನಿಂಬೋಜಿ ಕೂಡಿಕೊಂಡು ಕೊಡಲಿಯಿಂದ ಹೊಡೆದು ಕೊಲೆ ಮಾಡಿದ್ದಾರೆ ಎಂದು ತಿಳಿದು...

ಬೆಳಗಾವಿಯಲ್ಲಿ ಕಾಂಗ್ರೆಸ್ ಮತ್ತು ಪಕ್ಷೇತರ ಅಭ್ಯರ್ಥಿ ಗೆಲುವು! ಬಿಜೆಪಿಗೆ ಮುಖಭಂಗ.

ಬೆಳಗಾವಿ : ತೀವ್ರ ಕುತೂಹಲ ಕೆರಳಿಸಿದ ಬೆಳಗಾವಿ ದ್ವಿಸದಸ್ಯ ವಿಧಾನ ಪರಿಷತ್ ಚುನಾವಣೆಯಲ್ಲಿ ಪಕ್ಷೇತರನಾಗಿ ಸ್ಪರ್ಧಿಸಿದ್ದ ಲಖನ್ ಜಾರಕಿಹೊಳಿ ಜಯಗಳಿಸಿದ್ದಾರೆ.ಬಿಜೆಪಿಗೆ ಪ್ರತಿಷ್ಠೆಯ ಕಣವಾಗಿದ್ದ ಕ್ಷೇತ್ರದಲ್ಲಿ ಕಾಂಗ್ರೆಸ್ ನ ಚನ್ನರಾಜ ಹಟ್ಟಿಹೋಳಿ ತಮ್ಮ ಮೊದಲ ಪ್ರಯತ್ನದಲ್ಲೇ ಅದ್ಭುತ ಜಯದೊಂದಿಗೆ ವಿಧಾನಪರಿಷತ್ ಮೆಟ್ಟಿಲು ಹತ್ತಿದ್ದಾರೆ. ಎರಡನೇ ಸ್ಥಾನಕ್ಕೆ ಪಕ್ಷೇತರ ಅಭ್ಯರ್ಥಿ ಲಖನ್ ಜಾರಕಿಹೊಳಿ ಅಚ್ಚರಿಯ ಜಯಸಾಧಿಸಿ ಎಲ್ಲರ ಹುಬ್ಬೇರುವಂತೆ...

ಪಂಚಮಸಾಲಿ ಸ್ವಾಮೀಜಿಗೆ ಬಸವಣ್ಣನವರ ಹೆಸರು ಹೇಳುವ ನೈತಿಕತೆಯೇ ಇಲ್ಲ: ಪುಟ್ಟಸಿದ್ಧಶೆಟ್ಟಿ.

ಹುಬ್ಬಳ್ಳಿ: ಪಂಚಮಸಾಲಿ ಪೀಠದ ಸ್ವಾಮೀಜಿಯಾಗಿರುವ ಜಯಮೃತ್ಯುಂಜಯ ಸ್ವಾಮೀಜಿಯವರಿಗೆ ಬಸವಣ್ಣನವರ ಹೆಸರು ಹೇಳುವ ನೈತಿಕತೆಯೇ ಇಲ್ಲ. ಅಲ್ಲದೇ ಸ್ವಾಮೀಜಿ ಆದವರು ಅನ್ನದಾಸೋಹ ಮಾಡಬೇಕು ವಿನಃ ಅನ್ನ ಕಿತ್ತುಕೊಳ್ಳುವ ಕೆಲಸಕ್ಕೆ ಕೈ ಹಾಕುವುದು ನಾಚಿಕೆಗೇಡಿನ ಸಂಗತಿಯಾಗಿದೆ ಎಂದು ಕರ್ನಾಟಕ ರಾಜ್ಯ ಕಾಯಕ ಸಮಾಜ ಒಕ್ಕೂಟದ ಅಧ್ಯಕ್ಷ ಹಾಗೂ ಪರಿಷತ್ ಮಾಜಿ ಸದಸ್ಯ ಕೆ.ಸಿ.ಪುಟ್ಟಸಿದ್ಧಶೆಟ್ಟಿ ಆಕ್ರೋಶ ವ್ಯಕ್ತಪಡಿಸಿದರು. ನಗರದಲ್ಲಿಂದು ಮಾತನಾಡಿದ...

ಎನ್ಇಪಿ ಯಿಂದ ವಿದ್ಯಾರ್ಥಿಗಳಿಗೆ ಪ್ರಯೋಜನವಿಲ್ಲ: ಎನ್.ಎಸ್‌.ಯು.ಐ

ಹುಬ್ಬಳ್ಳಿ: ವಿದ್ಯಾರ್ಥಿಗಳ ಶೈಕ್ಷಣಿಕ ಬದುಕಿಗೆ ಉಪಯೋಗ ಇಲ್ಲದ ನ್ಯಾಷನಲ್ ಎಜುಕೇಶನ್ ಪಾಲಿಸಿಯನ್ನು ಕೇಂದ್ರ ಸರ್ಕಾರ ಜಾರಿಗೊಳಿಸಿರುವುದು ಖಂಡನೀಯವಾಗಿದೆ. ಕೂಡಲೇ ಇದರಲ್ಲಿರುವ ಲೋಪದೋಷಗಳನ್ನು ಗಮನಿಸಿ ಗುಣಮಟ್ಟದ ಶೈಕ್ಷಣಿಕ ನೀತಿಯನ್ನು ಜಾರಿಗೆ ತರಬೇಕು ಎಂದು ಎನ್.ಎಸ್.ಐ.ಯು ರಾಜ್ಯಾಧ್ಯಕ್ಷ ಕೀರ್ತಿ ಗಣೇಶ ಆಗ್ರಹಿಸಿದರು. ನಗರದಲ್ಲಿಂದು ಸುದ್ಧಿಗೋಷ್ಟಿ ನಡೆಸಿ ಮಾತನಾಡಿದ ಅವರು, ಎನ್ಇಪಿ ಅಂದರೆ ಬಹುತೇಕ ವಿದ್ಯಾರ್ಥಿಗಳಿಗೆ ಹಾಗೂ ಶಿಕ್ಷಕರಿಗೆ ಗೊತ್ತೇ...

ನಿಘಂಟು ಬಳಕೆಯಿಂದ ಶಬ್ದ ಸಂಪತ್ತು ವೃದ್ದಿ-  ಕಿತ್ತೂರು ಬಿಇಒ ಆರ್.ಟಿ .ಬಳಿಗಾರ

ಕಿತ್ತೂರು: ತಾಲೂಕಿನ ಕಾದರವಳ್ಳಿ ಎಸ್ ವಿ ಕೆ ಸರಕಾರಿ ಪ್ರೌಢಶಾಲೆಯಲ್ಲಿ ವಿದ್ಯಾಸೇತು ಪುಸ್ತಕ ವಿತರಿಸುವ ಕಾರ್ಯಕ್ರಮದಲ್ಲಿ ಕಿತ್ತೂರ ಕ್ಷೇತ್ರ ಶಿಕ್ಷಣಾಧಿಕಾರಿ ಅರ್ ಟಿ ಬಳಿಗಾರ ಮಾತನಾಡಿದ ಅವರು ಭಾಷಾ ಅಧ್ಯಯನದಲ್ಲಿ ತೊಡಗಿರುವವರು ನಿಘಂಟು ಬಳಕೆ ಮಾಡುವದರಿಂದ ಸುಲಭವಾಗಿ ಶಬ್ದಸಂಪತ್ತನ್ನು ಹೆಚ್ಚಿಸಿಕೊಂಡು ನಿರರ್ಗಳವಾಗಿ ಮಾತನಾಡಲು ಮತ್ತು ಬರವಣಿಗೆ ಮಾಡಲು ಸಾಧ್ಯವಾಗುತ್ತದೆ ಎಂದು ಅಭಿಪ್ರಾಯಪಟ್ಟರು. ಎಸ್ ವಿ ಕೆ...

ಸಿಪಿಐ ಕಚೇರಿ ಮೇಲೆ ಎಸಿಬಿ ದಾಳಿ: ಪಿಎಸ್‌ಐ, ಎಎಸ್‌ಐ ಬಂಧನ

ಕೊಟ್ಟೂರು(ಡಿ.12): ಅಕ್ರಮ ಮರಳು ಸಾಗಾಣಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೂಡ್ಲಿಗಿ ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಬಿ.ವೆಂಕಟೇಶ ನಾಯ್ಕ ವಿರುದ್ಧ ನ. 28ರಂದು ಪ್ರಕರಣ ದಾಖಲಾಗಿತ್ತು. ಈ ಪ್ರಕರಣದಲ್ಲಿ ವೆಂಕಟೇಶ್‌ ನಾಯ್ಕರನ್ನು ಕೈಬಿಡುವ ಸಂಬಂಧವಾಗಿ ಕೊಟ್ಟೂರು ಪೊಲೀಸ್‌ ಠಾಣೆಯ ಎಎಸ್‌ಐ ಸೈಪುಲ್ಲಾ ಅವರು ವೆಂಕಟೇಶನಾಯ್ಕರಿಗೆ ರೂ.10 ಲಕ್ಷ ಲಂಚ ನೀಡುವಂತೆ ಬೇಡಿಕೆ ಇಟ್ಟಿದ್ದರು. ಶನಿವಾರ ವೆಂಕಟೇಶ ನಾಯ್ಕ...

ಶಿಕ್ಷಣ ಕ್ಷೇತ್ರದಲ್ಲಿ ಅಚ್ಚರಿ ಬದಲಾಣೆ! ಟಿಇಟಿಗೆ ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಅವಕಾಶ: ಅಪಾಯಕಾರಿ ನಿರ್ಧಾರ .

ಶಾಲಾ ಶಿಕ್ಷಕರಾಗಲು ಎಂಜಿನಿಯರಿಂಗ್ ಪದವೀಧರರಿಗೆ ಅವಕಾಶ ನೀಡುವ ಸರಕಾರದ ನಿರ್ಧಾರದಿಂದ  B.Ed /D.Ed ತರಬೇತಿ ಹೊಂದಿದ ವಿಜ್ಞಾನ ಪದವೀಧರರ ಜೊತೆಗೆ ಕಲಾ, ವಾಣಿಜ್ಯ ಪದವೀಧರರು ಅವಕಾಶ ವಂಚಿತರಾಗಲಿದ್ದಾರೆ.  ಹೌದು. ಶಿಕ್ಷಕರಾಗುವ ಕನಸು ಹೊತ್ತು ಹತ್ತಿಪ್ಪತ್ತು ವರ್ಷಗಳಿಂದ ಜಾತಕ ಪಕ್ಷಿಯಂತೆ ಕಾದು ಕುಳಿತ ಹತ್ತಾರು ಸಾವಿರ ಯುವಪೀಳಿಗೆ, ಮತ್ತು  ವಯೋಮಿತಿ ಮೀರಿದ ಅರ್ಹರಿಗೆ ಸರಕಾರ ದೊಡ್ಡ ಆಘಾತ...

ಎಂಇಎಸ್ ವಿರುದ್ಧ ಬೆಳಗಾವಿ ಪಾಲಿಕೆ ಅಧಿಕಾರಿ ದೂರು

ಬೆಳಗಾವಿ: ನಗರದಲ್ಲಿ ಅನುಮತಿ ಪಡೆಯದೇ ಮಹಾಮೇಳ ಆಯೋಜಿಸಿರುವ ಮಹಾರಾಷ್ಟ್ರ ಏಕೀಕರಣ ಸಮಿತಿಯ ವಿರುದ್ಧ ಮಹಾನಗರ ಪಾಲಿಕೆ ಅಧಿಕಾರಿ ಪೊಲೀಸರಿಗೆ ದೂರು ನೀಡಿದ್ದಾರೆ. ರಸ್ತೆಯ ಮೇಲೆ ಅನಧಿಕೃತವಾಗಿ ವೇದಿಕೆ ನಿರ್ಮಿಸಲಾಗಿದೆ. ವೇದಿಕೆಯನ್ನು ತೆರವುಗೊಳಿಸಲು ಬಂದ ಪಾಲಿಕೆ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಲಾಗಿದೆ ಎಂದು ಮಹಾನಗರ ಪಾಲಿಕೆ ಅಭಿವೃದ್ಧಿ ವಿಭಾಗದ ಅಧಿಕಾರಿ ಲಕ್ಷ್ಮೀ ಸುಳಗೇಕರ್ ಬೆಳಗಾವಿಯ ಟಿಳಕವಾಡಿ ಠಾಣೆಗೆ ದೂರು...

About Me

1089 POSTS
0 COMMENTS
- Advertisement -spot_img

Latest News

ಗಡಿಭಾಗದ ಉಸ್ತುವಾರಿ ಸಚಿವರ ಕ್ಷೇತ್ರದಲ್ಲಿಯೇ ಆರೋಗ್ಯಕ್ಕಾಗಿ ಜನರ ಪರದಾಟ

ವರದಿ: ಉಮೇಶ ಗೌರಿ. ಬೆಳಗಾವಿ : ಭೌಗೋಳಿಕವಾಗಿ ದೊಡ್ಡ ಜಿಲ್ಲೆಯಾಗಿರುವ ಬೆಳಗಾವಿ ಜಿಲ್ಲೆಯು ಎರಡು ರಾಜ್ಯಗಳೊಂದಿಗೆ ಗಡಿ ಹಂಚಿಕೊಂಡಿದೆ. ಆದ್ದರಿಂದ ಬೆಳಗಾವಿ ಜಿಲ್ಲೆಯಲ್ಲಿ ಕಾಲಕಾಲಕ್ಕೆ ಆಡಳಿತ ಸುಧಾರಣೆಗಾಗಿ...
- Advertisement -spot_img
error: Content is protected !!