ವಿಜಯ ಬಡಿಗೇರ ಅವರಿಗೆ ಬಸವರಾಜ ಕಟ್ಟೀಮನಿ ಸಾಹಿತ್ಯ ಪುರಸ್ಕಾರ

ಖಾನಾಪೂರ: ಶಿಕ್ಷಣ ಕ್ಷೇತ್ರದಲ್ಲಿ , ಸಾಹಿತ್ಯದಲ್ಲಿ, ಸಂಘಟನೆಯಲ್ಲಿ ಕನ್ನಡಕ್ಕಾಗಿ ವಿಶೇಷ ಸೇವೆ ಸಲ್ಲಿಸುತ್ತಿರುವ ಖಾನಾಪುರ ತಾಲೂಕಿನ ಇಟಗಿ ಗ್ರಾಮದ ಚನ್ನಮ್ಮ ರಾಣಿ ಸಂಯುಕ್ತ ಪದವಿಪೂರ್ವ ಮಹಾವಿದ್ಯಾಲಯದ ನಿವೃತ್ತ ಪ್ರಾಂಶುಪಾಲರು, ಖಾನಾಪುರ ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟ ಪೂರ್ವ ಅಧ್ಯಕ್ಷರಾದ ವಿಜಯ ವೀ ಬಡಿಗೇರ ಅವರಿಗೆ ಕೇಂದ್ರ ಕನ್ನಡ ಸಾಹಿತ್ಯ ವೇದಿಕೆಯ ‘ಬಸವರಾಜ ಕಟ್ಟೀಮನಿ ಸಾಹಿತ್ಯ ಪುರಸ್ಕಾರ’ ದೊರೆತಿದೆ.

ಇತ್ತೀಚೆಗೆ ಬೆಳಗಾವಿಯಲ್ಲಿ ನಡೆದ ಸಮಾರಂಭದಲ್ಲಿ ಗಣ್ಯರ ಉಪಸ್ಥಿತಿಯಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಖ್ಯಾತ ಸಾಹಿತಿ, ಕೇಂದ್ರ ಕನ್ನಡ ಸಾಹಿತ್ಯ ಅಕಾಡೆಮಿಯ ಸದಸ್ಯರಾದ ಸರಜೂ ಕಾಟ್ಕರ್,ಸಾಹಿತಿ ಗುರುದೇವಿ ಹುಲೆಪ್ಪನವರಮಠ, ಕವಯಿತ್ರಿ ಆಶಾ ಕಡಪಟ್ಟಿ, ದಾನೋಜಿ, ಕೆಂ‌.ಕ.ಸಾ.ವೇದಿಕೆಯ ಸಂಸ್ಥಾಪಕ ಅಧ್ಯಕ್ಷ ಕೊಟ್ರೇಶ್ ಉಪ್ಪಾರ, ಅಧ್ಯಕ್ಷೆ ಶಾಲಿನಿ, ಜಿಲ್ಲಾಧ್ಯಕ್ಷೆ ಸುಶೀಲಾ ಗುರವ ಮುಂತಾದ ಗಣ್ಯಮಾನ್ಯರ, ಪದಾಧಿಕಾರಿಗಳ, ಕನ್ನಡಾಭಿಮಾನಿಗಳು ಉಪಸ್ಥಿತರಿದ್ದರು.

Share This Article
WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

";