ಗಂಡನ ಮನೆಯಲ್ಲಿಯೇ ನೇಣಿಗೆ ಶರಣಾದ ಕಂದಾಯ ಅಧಿಕಾರಿ ಚೈತ್ರ

ಬಳ್ಳಾರಿ: ಕಂದಾಯ ಅಧಿಕಾರಿಯೊಬ್ಬರು ನೇಣಿಗೆ ಶರಣಾಗಿರುವ ಘಟನೆ ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ಪಟ್ಟಣದ ಶ್ರೀ ಸದಾಶಿವ ನಗರದಲ್ಲಿ ನಡೆದಿದೆ.

ಮೃತ ದುರ್ದೈವಿ. ಚೈತ್ರಾ (25) ಕೊಪ್ಪಳ ನಗರಸಭೆಯಲ್ಲಿ  ಕಂದಾಯ ಅಧಿಕಾರಿಯಾಗಿ ಕೆಲಸ ಮಾಡುತಿದ್ದರು. ಬಳ್ಳಾರಿ ಜಿಲ್ಲೆಯ ಸಿರಗುಪ್ಪದಲ್ಲಿ ಗಂಡನ ಜೊತೆಯಲ್ಲಿ ವಾಸವಾಗಿದ್ದರು. ಇವರು ಇಂದು ಬೆಳಗಿನ ಜಾವ ಆತ್ಮಹತ್ಯೆಗೆ  ಶರಣಾಗಿದ್ದಾರೆ.

ಚೈತ್ರಾಳ ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಈ ಸಂಬಂಧ ಸಿರುಗುಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಕ್ಕಪಕ್ಕದ ಮನೆಯವರು ಹೇಳುವ ಪ್ರಕಾರ ಗಂಡ ಹೆಂಡತಿ ಇಬ್ಬರೂ ಚೆನ್ನಾಗಿಯೇ ಇದ್ದರು. ಯಾವತ್ತು ಇಬ್ಬರು ನಡುವೆ ಯಾವುದೇ ತರಹದ ಜಗಳ ಗಲಾಟೆ ಇರಲಿಲ್ಲ. ಆದರೆ ಅವರ ಸಾವಿಗೆ ಕಾರಣ ಬೇರೆ ಇರಬಹುದು ಎನ್ನುವ ಅನುಮಾನ ವ್ಯಕ್ತಪಡಿಸಿದ್ದಾರೆ.

ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡ  ತನಿಖೆ ನಡೆಸುತ್ತಿದ್ದಾರೆ.

Share This Article
WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

";