ಮಾಜಿ ಸಚಿವ ಡಿ.ಬಿ.ಇನಾಮದಾರ ಭೇಟಿಯಾದ ಚನ್ನರಾಜ ಹಟ್ಟಿಹೊಳಿ

ಸುದ್ದಿ ಸದ್ದು ನ್ಯೂಸ್
ನೇಗಿನಹಾಳ:27:ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲೆಯ ಪ್ರತಿ ವಿಧಾನಸಭಾ ಕ್ಷೇತ್ರದಲ್ಲೂ ಬಿರುಸಿನ ಪ್ರಚಾರ ಕೈಗೊಂಡಿರುವ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಚನ್ನರಾಜ ಹಟ್ಟಿಹೊಳಿ ಅವರು ಇಂದು ಮಾಜಿ ಸಚಿವ ಡಿ.ಬಿ.ಇನಾಮದಾರ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.

ಕಿತ್ತೂರು ಕ್ಷೇತ್ರದಲ್ಲಿ ತಮ್ಮದೇಯಾದ ಅಪಾರ ಸಂಖ್ಯೆಯ ಅಭಿಮಾನಿಗಳನ್ನು ಹೊಂದಿರುವ ಡಿ.ಬಿ.ಇನಾಮದಾರ ಅವರು ಈಗಾಗಲೇ ಕ್ಷೇತ್ರದ ಕಾಂಗ್ರೆಸ್ ಬೆಂಬಲಿತ ಗ್ರಾಮ ಪಂಚಾಯತ ಸದಸ್ಯರನ್ನು ಭೇಟಿ ಮಾಡಿ ಹಲವು ಸುತ್ತಿನ ಮಾತುಕತೆ ನಡೆಸಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗೆ ಕೇವಲ ಒಂದೇ ಒಂದು ಮತ ನೀಡುವ ಮೂಲಕ ಅಭ್ಯರ್ಥಿ ಚನ್ನರಾಜ ಹಟ್ಟಿಹೊಳಿ ಅವರನ್ನು ಚುನಾವಣೆಯಲ್ಲಿ ಗೆಲ್ಲಿಸುವಂತೆ ಮನವಿ ಮಾಡಿದ್ದಾರೆ.

ಈ ಹಿನ್ನೆಲೆಯಲ್ಲಿ ಅಭ್ಯರ್ಥಿ ಚನ್ನರಾಜ ಹಟ್ಟಿಹೊಳಿ ಅವರು ಈವತ್ತು ಇನಾಮದಾರ ಅವರನ್ನು ನೇಗಿನಹಾಳದ ಅವರ ನಿವಾಸಕ್ಕೆ ಭೇಟಿ ಮಾಡಿ ಬೆಂಬಲ ಕೋರಿದರು.

ಈ ಸಂದರ್ಭದಲ್ಲಿ ಸಿದ್ದಗೌಡ ಮೋದಗಿ, ಸಂತೋಷಗೌಡ ಪಾಟೀಲ, ಬಸನಗೌಡ ಪಾಟೀಲ, ಶ್ರೀಶೈಲ ಮತ್ತಿಕೊಪ್ಪ, ಸುಧೀರ ಪಾಟೀಲ, ಮುದಕಪ್ಪ ಬಳಗಣ್ಣವರ ಸೇರಿದಂತೆ ಹಲವಾರು ಗ್ರಾಮ ಪಂಚಾಯತ ಸದಸ್ಯರುಗಳು ಕಾರ್ಯಕರ್ತರು ಉಪಸ್ಥಿತರಿದ್ದರು.

Share This Article
WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

";