ಮೂರು ದಿನಗಳ ಕಾಲ ಕಾಲೇಜುಗಳಿಗೆ ರಜೆ ಘೋಷಿಸಿದ ಸಿಎಂ, ಬೊಮ್ಮಾಯಿ

ಉಮೇಶ ಗೌರಿ (ಯರಡಾಲ)

ನವದೆಹಲಿ(ಫೆ. 08) ದೆಹಲಿ ಪ್ರವಾಸದಲ್ಲಿರುವ ಸಿಎಂ ಬಸವರಾಜ ಬೊಮ್ಮಾಯಿ  ಮೂರು ದಿನಗಳ ಕಾಲ ಕಾಲೇಜುಗಳಿಗೆ ರಜೆ ಘೋಷಿಸಿದ್ದಾರೆ. 

ನವದೆಹಲಿಯಲ್ಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಂದ ರಜೆ ಘೋಷಣೆ ಆದೇಶ ನೀಡಿದ್ದಾರೆ. ರಾಜ್ಯದಲ್ಲಿ ಶಾಂತಿ ಕಾಪಾಡುವಂತೆ ಮನವಿ ಮಾಡಿಕೊಂಡಿದ್ದಾರೆ. ವಿದ್ಯಾರ್ಥಿಗಳು ಶಿಕ್ಷಕರು ಹಾಗೂ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿ ಹಾಗೂ ರಾಜ್ಯದ ಸಮಸ್ತ ಜನತೆಗೆ ಸಿಎಂ ಮನವಿ ಮಾಡಿಕೊಂಡಿದ್ದಾರೆ.

ಹಿಜಾಬ್ ವಿವಾದ ಹಲವು ಜಿಲ್ಲೆಗಳಿಗೆ ವ್ಯಾಪಿಸಿದ್ದು ಕರ್ನಾಟಕ ಹೈಕೋರ್ಟ್ ವಿಚಾರಣೆಯನ್ನು ಬುಧವಾರಕ್ಕೆ ಮುಂದೂಡಿದೆ. ಈ ನಡುವೆ  ಕಾಲೇಜು, ಇಂಜಿನಿಯರಿಂಗ್ ಕಾಲೇಜುಗಳಿಗೂ ರಜೆ ಘೋಷಣೆ ಮಾಡಲಾಗಿದೆ. 

ಶಿಕ್ಷಣ ಸಚಿವರ ಹೇಳಿಕೆ: ಕರ್ನಾಟಕದಲ್ಲಿ ಐದು ಸಾವಿರ ಪಿಯು ಕಾಲೇಜುಗಳಿವೆ. ಹತ್ತನ್ನೆರಡು ಕಾಲೇಜುಗಳಲ್ಲಿ ಸಂಘರ್ಷ ಶುರುವಾಗಿದೆ ಕೆಲ ಡಿಗ್ರಿ ಕಾಲೇಜಿನಲ್ಲೂ ಹಿಜಾಬ್, ಕೇಸರಿ ಸಂಘರ್ಷ ಶುರುವಾಗಿದೆ. ಎಲ್ಲೆಲ್ಲಿ ಲಾ ಆಂರ್ಡರ್ ತೊಂದರೆ ಆಗಲಿದೆ. ಅಲ್ಲಿನ ಡಿಡಿಪಿಯು ಪರಿಸ್ಥಿತಿ ನೋಡಿಕೊಂಡು ರಜೆ ಘೋಷಿಸಲು ಅಧಿಕಾರ ನೀಡಿದ್ದೇನೆ ಎಂದು ಶಿಕ್ಷಣ ಸಚಿವರು ತಿಳಿಸಿದ್ದರು.

ಅನೇಕ ವಿದ್ಯಾರ್ಥಿಗಳು ಕಾಲೇಜು, ಕಾಲೇಜು ಯೂನಿಫಾರ್‌ಮ್ ಧರಿಸಿ ತರಗತಿಗೆ ಬರ್ತಿದ್ದಾರೆ. ತರಗತಿಗಳು ಉತ್ತಮವಾಗಿ ನಡೆಯುತ್ತಿದೆ. ಬಹುತೇಕ ವಿದ್ಯಾರ್ಥಿಗಳು ತರಗತಿ ನಡೆಯಬೇಕು ಅಂತಿದ್ದಾರೆ. ಶಾಲಾ ಸಮವಸ್ತ್ರ ಬೇಕು ಅಂತ ಹೇಳ್ತಿದ್ದಾರೆ. ಬಾಗಲಕೋಟೆ ಸೇರಿದಂತೆ ಕೆಲವೆಡೆ ಬೇಡ ಅಂತಿದ್ದಾರೆ. ಡಿಡಿಪಿಯು ಪರಿಸ್ಥಿತಿ ನೋಡಿಕೊಂಡು  ತೀರ್ಮಾನ ಮಾಡುತ್ತಾರೆ ಎಂದು ಶಿಕ್ಷಣ ಸಚಿವರು ತಿಳಿಸಿದ್ದರು.

Koo App

ಕೋರ್ಟು ತೀರ್ಪಿಗೆ ಕಾಯುತ್ತಿದ್ದೇನೆ, ನಮ್ಮ ಅಭಿಪ್ರಾಯ ಭಾವನಾತ್ಮಕವಾಗಿರಬಹುದು, ಅದರಲ್ಲಿ ಕಿರುಬೆರಳಿನಷ್ಟು ಸತ್ಯವಿರಬಹುದು ಆದ್ರೆ ಸಂವಿಧಾನದ ಘಮಕ್ಕೆ ಯಾವುದೇ ಗುಡಿಯ ಉದ್ದಿನಕಡ್ಡಿಯ ಅಥವಾ ಮುಸ್ಲಿಂಮನ ಅತ್ತರಿನ ಘಮ ಅಂಟಿರುವಿದಿಲ್ಲ. ನಮ್ಮ ಅಭಿಪ್ರಾಯ ಈ ಕೋರ್ಟ್ ನಿಂದ ಮತ್ತೊಂದು ಕೋರ್ಟಿಗೆ ಹಾರಲಿಕ್ಕೆ ಸಹಾಯವಾಗಬಹುದೇ ಹೊರತು ಅದು ನಿರ್ಣಾಯಕವಂತೂ ಅಲ್ಲ. #ಹಿಜಾಬ್_ವಿವಾದ

Sunil NG (@Sunil_NG) 8 Feb 2022

ಸಂವಿಧಾನದ ಆಶಯದಂತೆ ನಡೆಯುತ್ತೇವೆ:  ಹಿಜಾಬ್ ಗೊಂದಲವನ್ನು ಮಂಗಳವಾರ ವಿಚಾರಣೆ ನಡೆಸಿದ ಕರ್ನಾಟ ಹೈಕೋರ್ಟ್, ಭಾವೋದ್ರೇಕ ಅಥವಾ ಭಾವನಾತ್ಮಕವಾಗಿ ನಾವು ಈ ಪ್ರಕರಣದ ಬಗ್ಗೆ ಮಾತನಾಡುವುದಿಲ್ಲ. ಕಾನೂನಿನ ರೀತಿಯಲ್ಲಿಯೇ ಹೋಗುತ್ತೇವೆ ಎಂದು ಹೇಳಿದೆ. ಸಂವಿಧಾನವು ನಮಗೆ ಏನು ಹೇಳುತ್ತದೆಯೋ ಅದರಂತೆಯೇ ನಾವು ಹೋಗುತ್ತೇವೆ. ಸಂವಿಧಾನವೇ ನನಗೆ ಭಗವದ್ಗೀತೆ ಎಂದು ತಿಳಿಸಿದ್ದು  ಬುಧವಾರಕ್ಕೆ ವಿಚಾರಣೆ ಮುಂದೂಡಿದೆ.

ಸಮವಸ್ತ್ರವನ್ನು ನಿರ್ಧರಿಸಲು ಕಾಲೇಜುಗಳಿಗೆ ಸ್ವಾಯತ್ತತೆ ನೀಡಲಾಗಿದೆ ಎಂದು ಅಡ್ವೊಕೇಟ್ ಜನರಲ್ ಕರ್ನಾಟಕ ಹೈಕೋರ್ಟ್‌ಗೆ ತಿಳಿಸಿದರು. ಹಾಗೇನಾದರೂ ಹಿಜಾಬ್ ಧರಿಸಲೇಬೇಕು ಎಂದು ಬಯಸುವ ವಿದ್ಯಾರ್ಥಿಗಳು ಕಾಲೇಜು ಅಭಿವೃದ್ಧಿ ಸಮಿತಿಯನ್ನು ಸಂಪರ್ಕಿಸಬೇಕು ಎಂದು ಅಡ್ವೊಕೇಟ್ ಜನರಲ್ ಹೇಳಿದ್ದಾರೆ.  ಅರ್ಜಿದಾರರ ಪರವಾದ ಮಂಡಿಸಿದ ಹಿರಿಯ ವಕೀಲ ದೇವದತ್ ಕಾಮತ್, ‘ನಮ್ಮ ಜಾತ್ಯತೀತತೆ ಗೌರವದ ಮೇಲೆ ನಿಂತಿದೆ. ರಾಜ್ಯವು ಎಲ್ಲಾ ಧರ್ಮವನ್ನು ಗೌರವಿಸುತ್ತದೆ. “ಭಾರತದಲ್ಲಿ ಜಾತ್ಯತೀತತೆ ವಿಭಿನ್ನವಾಗಿದೆ ಎಂಬುದನ್ನು ಮನಗಾಣಬೇಕು ಎಂದು ತಿಳಿಸಿದರು.

Koo App

#ಹಿಜಾಬ್_ವಿವಾದ ಧರ್ಮ ರಕ್ಷಕರು ಮೊದಲು ಸಮಾಜದಲ್ಲಿ ಸಾಮರಸ್ಯದ ಮತ್ತು ಒಗ್ಗಟ್ಟಿನ ಮಂತ್ರ ಸೌಹಾರ್ದತೆ ಯ ಪಾಠ ಮಾಡಬೇಕೆ ಹೊರೆತು ಧರ್ಮ ಸಂಘಟನೆಗಳು ಧರ್ಮದ ಅಹಿಂಸಾ ತತ್ವವನ್ನು ಪಾಲಿಸುವ ಕಾರ್ಯ ಮಾಡಬೇಕೆ ಹೊರೆತು ಸಮುದಾಯಗಳ ಒಗ್ಗಟ್ಟನ್ನು ಒಡೆಯುವ ಸಂಘಟನೆಗಳನ್ನು ಹುಟ್ಟುಹಾಕಬಾರದು ಧರ್ಮದ ಮೂಲ ದೇವರಾದ್ರೆ ದೇವರ ಮೂಲ ಮಾನವ 🙏ಮಾನವ ಧರ್ಮಕ್ಕೆ ಜಯವಾಗಲಿ🙏 ಮಾನವ ಸೃಷ್ಟಿಸಿದ ಧರ್ಮಕ್ಕಲ್ಲ

Arun Aghora (@Achar…hudga..vishwakarma.) 8 Feb 2022

 ಅರ್ಜಿದಾರರ ಪರ ವಾದ ಮಂಡಿಸಿದ ಹಿರಿಯ ವಕೀಲ ದೇವದತ್ತ್ ಕಾಮತ್, ಮುಸ್ಲಿಮ್ ಸಂಪ್ರದಾಯದ ಪ್ರಮುಖ ಭಾಗವೆಂದರೆ ಸ್ಕಾರ್ಫ್ ಧರಿಸುವುದಾಗಿದೆ ಎಂದು ಹೇಳಿದರು. ಕೆಲವು ದೇಶಗಳಲ್ಲಿ ಋಣಾತ್ಮಕ ಜಾತ್ಯತೀತತೆಯನ್ನು ಅಭ್ಯಸಿಸುತ್ತಾರೆ. ಅವರಲ್ಲಿ ಧಾರ್ಮಿಕ ಐಡೆಂಟಿಟಿಯನ್ನು ಸಾರ್ವಜನಿಕವಾಗಿ ತೋರಿಸುವ ಹಾಗಿಲ್ಲ. ಆದರೆ, ಭಾರತ ಈ ರೀತಿಯ ದೇಶವಲ್ಲ ಎಂಬುದನ್ನು ತೆರೆದಿಟ್ಟು. ಬೆಳಗ್ಗೆಯಿಂದ ಆರಂಭವಾದ ವಿಚಾರಣೆ ಮುಂದುವರಿದಿತ್ತು. ಈ ನಡುವೆ ಸರ್ಕಾರ ರಜೆ ಘೋಷಣೆ ತೀರ್ಮಾನ ಮಾಡಿದೆ.

 

Share This Article
";