ಕಳ್ಳಬಟ್ಟಿ ಸಾರಾಯಿ ಮಾರಾಟ: ಒಂದು ವರ್ಷ ಕಠಿಣ ಜೈಲು ಶಿಕ್ಷೆ; 10 ರೂ. ದಂಡ ವಿಧಿಸಿ ಕೋರ್ಟ್ ತೀರ್ಪು

ಬೈಲಹೊಂಗಲ: ಕಳ್ಳಬಟ್ಟಿ ಸಾರಾಯಿ ಸಂಗ್ರಹಿಸಿ ಮಾರಾಟ ಮಾಡುತ್ತಿದ್ದ ಆರೋಪಿಗೆ ಇಲ್ಲಿನ ಪ್ರಧಾನ ಸಿವಿಲ್ ಜೆಎಂಎಫ್‌ಸಿ ನ್ಯಾಯಾಲಯ 1 ವರ್ಷ ಕಠಿಣ ಜೈಲು ಶಿಕ್ಷೆ ಹಾಗೂ 10 ಸಾವಿರ ರೂ.ದಂಡ ವಿಧಿಸಿ ತೀರ್ಪು ಪ್ರಕಟಿಸಿದೆ.

ಬೈಲಹೊಂಗಲ ತಾಲೂಕಿನ ಮೋಹರೆ ಗ್ರಾಮದ ನಿವಾಸಿ ಸದೆಪ್ಪ ಬೋರಪ್ಪ ತಳವಾರ (30) ಶಿಕ್ಷೆಗೊಳಗಾದ ವ್ಯಕ್ತಿ. ಶಿಕ್ಷೆಗೊಳಗಾಗಿರುವ ಆರೋಪಿ ಸದೆಪ್ಪ ತಳವಾರ ಮೊಹರೆಯಲ್ಲಿರುವ ತನ್ನ ಮನೆಯಲ್ಲಿ 4 ಲೀಟರ್ ಕಳ್ಳಬಟ್ಟಿ ಸಾರಾಯಿಯನ್ನು ಮಾರಾಟ ಮಾಡುವ ಉದ್ದೇಶದಿಂದ ಸಂಗ್ರಹಿಸಿಟ್ಟುಕೊಂಡಿದ್ದರ ಬಗ್ಗೆ 2020 ರಂದು ಪ್ರಕರಣ ದಾಖಲಾಗಿತ್ತು. ಇಲಾಖೆಯ ತನಿಖಾಧಿಕಾರಿಗಳು ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು.

ಪ್ರಕರಣದ ವಿಚಾರಣೆಯನ್ನು ಕೈಗೆತ್ತಿಕೊಂಡ ಜೆಎಂಎಫ್‌ಸಿ ನ್ಯಾಯಾಲಯದ ನ್ಯಾಯಾಧೀಶ ಮನುಶರ್ಮಾ ಎಸ್ ಪಿ ಅವರು ವಾದ-ಪ್ರತಿವಾದಗಳನ್ನು ಪರಿಶೀಲಿಸಿ ಆರೋಪಿಗೆ 1 ವರ್ಷ ಕಠಿಣ ಜೈಲು ಶಿಕ್ಷೆ ಹಾಗೂ 10 ಸಾವಿರ ರೂ. ದಂಡ ವಿಧಿಸಿ ತೀರ್ಪು ಪ್ರಕಟಿಸಿದರು.

ಸರಕಾರದ ಪರವಾಗಿ ಜೆಎಂಎಫ್‌ಸಿ ನ್ಯಾಯಾಲಯದ ಸಹಾಯಕ ಸರ್ಕಾರಿ ಅಭಿಯೋಜಕಿ ಸುನೀತಾ ಗೌಡ ವಾದ ಮಂಡಿಸಿದ್ದರು.

Share This Article
WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

";