ಗಣೇಶೋತ್ಸವ ಆಚರಣೆಗೆ ಅನುಮತಿ ನೀಡದಿದ್ದರೇ ಶೆಟ್ಟರ್ ಮನೆ ಮುಂದೆ ಪ್ರತಿಭಟನೆ : ಮುತಾಲಿಕ್

ಹುಬ್ಬಳ್ಳಿ: ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಅನುಮತಿ ನೀಡದಿದ್ದರೆ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಮನೆ ಮುಂದೆ ಇದೇ ದಿ. 26 ರಂದು ಪ್ರತಿಭಟನೆ ಮಾಡಲಾಗುವುದು ಎಂದು ಶ್ರೀರಾಮ ಸೇನಾ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಹೇಳಿದರು.

ನಗರದ ದುರ್ಗದಬೈಲ್ ನಲ್ಲಿ ಸಹಿ ಸಂಗ್ರಹ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಹಿಂದೂ ಪರ ಸಂಘಟನೆಗಳಿಂದ ನಗರದ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಗಡುವು ನೀಡಿದರೂ ಸಹಿತ ಸರ್ಕಾರ ಹಾಗೂ ಹು-ಧಾ ಮಹಾನಗರ ಪಾಲಿಕೆ ಮೀನಾಮೇಷ ಎಣಿಸುತ್ತಿದೆ.

ಈದ್ಗಾ ಮೈದಾನ ಯಾರ ಸ್ವತ್ತಲ್ಲ. ಅದು ಸಾರ್ವಜನಿಕ ಸ್ವತ್ತು. ಅಲ್ಲಿ ಮುಸ್ಲಿಂ ಪ್ರಾರ್ಥನೆಗೆ ಅವಕಾಶ ನೀಡುತ್ತಾರೆ. ಆದರೇ ಗಣೇಶೋತ್ಸವ ಆಚರಣೆಗೆ ಏಕೆ ಅವಕಾಶ ನೀಡುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ ಅವರು, ಅನುಮತಿ ನೀಡಿದರೂ ಸರಿ. ನೀಡದಿದ್ದರೂ ಸರಿ ನಾವು ಸಾವಿರಾರು ಕಾರ್ಯಕರ್ತರ ನೇತೃತ್ವದಲ್ಲಿ ಈದ್ಗಾ ಮೈದಾನದಲ್ಲಿ ಗಣೇಶನನ್ನು ಪ್ರತಿಷ್ಠಾಪನೆ ಮಾಡುತ್ತೇವೆ. ಅದೇನ್ ಮಾಡತೀರೋ ನಾವು ನೋಡತಿವಿ ಎಂದು ಮುತಾಲಿಕ್ ಕಿಡಿ ಕಾರಿದರು.

ಈ ಗಡವು ಮೀರಿದರೂ ಸಹಿತ ನಾವು ಗಣೇಶೋತ್ಸವ ಆಚರಣೆಯನ್ನು ಈದ್ಗಾ ಮೈದಾನದಲ್ಲಿ ಆಚರಣೆ ಮಾಡೇ ಮಾಡುತ್ತೇವೆ ಎಂದು ಮುತಾಲಿಕ್ ಹೇಳಿದರು.

Share This Article
WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

";