ಸಚಿವ ಪ್ರಿಯಾಂಕ್ ಖರ್ಗೆಗೆ 5 ಸಾವಿರ ರೂ. ದಂಡ ಹಾಕಿದ ಅಧಿಕಾರಿಗಳು !

ಉಮೇಶ ಗೌರಿ (ಯರಡಾಲ)

ಕಲಬುರಗಿ: ಅನುಮತಿ ಪಡೆಯದೆ ಬೆಂಬಲಿಗರು ಹಾಕಿದ್ದ ಬ್ಯಾನರ್​ಗೆ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆಗೆ ಕಲಬುರಗಿ ಮಹಾನಗರ ಪಾಲಿಕೆ ಅಧಿಕಾರಿಗಳು ದಂಡ ವಿಧಿಸಿದ್ದಾರೆ.

ಗೃಹಲಕ್ಷ್ಮಿ’ ಯೋಜನೆಗೆ ಚಾಲನೆ ನೀಡಲು ಸಚಿವ ಪ್ರಿಯಾಂಕ್​ ಖರ್ಗೆ ಆಗಮಿಸಿದ್ದಾಗ ಈ ಘಟನೆ ನಡೆದಿದೆ. ನಗರದ ಆಳಂದ ಚೆಕ್​ಪೋಸ್ಟ್​ ಬಳಿ ಪ್ರಿಯಾಂಕ್ ಖರ್ಗೆ ಭಾವಚಿತ್ರವಿರುವ ಬ್ಯಾನರ್​​ ಅನ್ನು ಬೆಂಬಲಿಗರು ಹಾಕಿದ್ದರು. ಬ್ಯಾನರ್ ಹಾಕಿದವರ ಹೆಸರಿಲ್ಲದಿದ್ದರಿಂದ ಸಚಿವರಿಗೆ ಪಾಲಿಕೆ ದಂಡವಿಧಿಸಿದೆ.

ಸದ್ಯ 5 ಸಾವಿರ ರೂ. ದಂಡ ಪಾವತಿಸಲು ಪ್ರಿಯಾಂಕ್ ಖರ್ಗೆ ಒಪ್ಪಿಕೊಂಡಿದ್ದು, ತಮ್ಮ ಸಿಬ್ಬಂದಿಗೆ ದಂಡದ ಹಣ ಪಾವತಿಸಲು ಸೂಚನೆ ನೀಡಿದ್ದಾರೆ ಎನ್ನಲಾಗುತ್ತಿದೆ. ಅನುಮತಿ ಪಡೆಯದೆ ಬ್ಯಾನರ್ ಹಾಕುವವರ ವಿರುದ್ಧ ಕ್ರಮಗೊಳ್ಳುವಂತೆ ಕೆಲವು ದಿನಗಳ ಹಿಂದೆ ಅಧಿಕಾರಿಗಳಿಗೆ ಪ್ರಿಯಾಂಕ್ ಖರ್ಗೆ ಸೂಚನೆ ನೀಡಿದ್ದರು.

Share This Article
";