ಬಿತ್ತುವ ಕೂರಿಗೆ ಸಂಶೋಧಕ ಅಬ್ದುಲ್ ಖಾದರ್ ನಡಕಟ್ಟಿ ಅವರಿಗೆ ಪದ್ಮಶ್ರೀ ಪ್ರಶಸ್ತಿ

ಧಾರವಾಡ: ಜಿಲ್ಲೆಯ ಅಣ್ಣಿಗೇರಿ ಪಟ್ಟಣದ ಅಬ್ದುಲ್ ಖಾದರ್ ನಡಕಟ್ಟಿ ಅವರು ಗಣರಾಜ್ಯೋತ್ಸವ ನಿಮಿತ್ಯ ಕೇಂದ್ರ ಸರ್ಕಾರ ಕೊಡಮಾಡುವ ಪದ್ಮಶ್ರೀ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ರೈತರ ಕೃಷಿ ಸಲಕರಣೆಯಾದ ಬಿತ್ತುವ ಕೂರಿಗೆಯನ್ನು ಸಂಶೋಧನೆ ಮಾಡಿದ್ದಾರೆ. ಅವರು ರಾಜ್ಯ ಸರ್ಕಾರದಿಂದ ಅನೇಕ ಪ್ರಶಸ್ತಿಗೆ ಭಾಜನರಾಗಿರುತ್ತಾರೆ. ರಾಜ್ಯ ಸೇರಿದಂತೆ ಧಾರವಾಡ ಜಿಲ್ಲೆಯಾದ್ಯಂತ ಹೆಮ್ಮೆಯ ವಿಷಯವಾಗಿದೆ.

ರಾಜ್ಯ ಸೇರಿದಂತೆ ಅಂತರ ರಾಜ್ಯಗಳಲ್ಲೂ ಸಂಶೋಧನೆ ಮಾಡಿರುವ ಇವರ ಕೃಷಿ ಸಲಕರಣೆಗಳಿಗೆ ಬಹಳಷ್ಟು ಬೇಡಿಕೆ ಇರುತ್ತದೆ.

 

Share This Article
WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

";