ನೌಕರರಿಗೆ ದೀಪಾವಳಿ ಗಿಫ್ಟ್! ಹಳೆ ಪಿಂಚಣಿ ಯೋಜನೆ ಮರು ಜಾರಿಗೆ: ಪಂಜಾಬ್ ಸಿಎಮ್ ಭಗವಂತ್ ಮಾನ್

ಪಂಜಾಬ್ : ಸರ್ಕಾರವು ನೌಕರರಿಗೆ ಹಳೆಯ ಪಿಂಚಣಿ ಯೋಜನೆಯನ್ನು ಮರುಸ್ಥಾಪಿಸಲು ಮುಂದಾಗಿದ್ದು ದೀಪಾವಳಿ ಉಡುಗೊರೆ ನೀಡಿದೆ.

ಮುಖ್ಯಮಂತ್ರಿ ಭಗವಂತ್ ಮಾನ್ ಶುಕ್ರವಾರ ತನ್ನ ನೌಕರರಿಗೆ ಹಳೆಯ ಪಿಂಚಣಿ ಯೋಜನೆಯನ್ನು ಮರುಸ್ಥಾಪಿಸುವ ಪಂಜಾಬ್ ಸರ್ಕಾರದ ನಿರ್ಧಾರವನ್ನು ರಾಜ್ಯದ ನೌಕರರಿಗೆ ದೀಪಾವಳಿ ಉಡುಗೊರೆಯಾಗಿ ಉಲ್ಲೇಖಿಸಿದ್ದಾರೆ.

ಹಳೆ ಯೋಜನೆ ಪುನರ್ ಜಾರಿ ಬಗ್ಗೆ ಘೋಷಣೆ ಮಾಡಿದ ಅವರು, ‘ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ತಾತ್ವಿಕ ನಿರ್ಧಾರ ಕೈಗೊಂಡಿದ್ದೇವೆ.ಇದರಿಂದ ಲಕ್ಷಾಂತರ ನೌಕರರಿಗೆ ಅನುಕೂಲವಾಗಲಿದೆ’ ಎಂದರು.

ಸರ್ಕಾರಿ ನೌಕರರ 6% ತುಟ್ಟಿಭತ್ಯೆಗೆ ರಾಜ್ಯ ಕ್ಯಾಬಿನೆಟ್ ಅನುಮೋದನೆ ನೀಡಿದೆ ಎಂದು ಮಾನ್ ಹೇಳಿದ್ದಾರೆ.

2004 ರಲ್ಲಿ ಸ್ಥಗಿತಗೊಂಡ ಹಿಂದಿನ ಪಿಂಚಣಿ ಯೋಜನೆಯನ್ನು ಮರುಸ್ಥಾಪಿಸುವುದು ರಾಜ್ಯ ಸರ್ಕಾರಿ ನೌಕರರ ಪ್ರಾಥಮಿಕ ಬೇಡಿಕೆಗಳಲ್ಲಿ ಒಂದಾಗಿದೆ.

Share This Article
WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

";